ಫೆ.24 ರಂದು ಜಯನಗರದ ಮಂಗಳಮಂಟಪದ ಆಡಿಟೋರಿಯಂನಲ್ಲಿ ಕರ್ನಾಟಿಕ್ ಮತ್ತು ಹಿಂದೂಸ್ತಾನಿ ಸಂಗೀತ ಕಾರ್ಯಕ್ರಮ

ಬೆಂಗಳೂರು, ಫೆ.10-ಸುರಕ್ಷಾ ಅಂಗವಿಕಲ ಚಾರಿಟಬಲ್ ಟ್ರಸ್ಟ್ ಮತ್ತು ಹಿಂದೂಸ್ತಾನಿ ಮ್ಯೂಸಿಕಲ್ ಸ್ಕೂಲ್ ಸಹಯೋಗದೊಂದಿಗೆ ಫೆ.24 ರಂದು ಜಯನಗರದ ಮಂಗಳಮಂಟಪದ ಆಡಿಟೋರಿಯಂನಲ್ಲಿ ಕರ್ನಾಟಿಕ್ ಮತ್ತು ಹಿಂದೂಸ್ತಾನಿ ಸಂಗೀತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್‍ನ ಅಧ್ಯಕ್ಷ ಪಿ.ಶ್ರೀನಿವಾಸ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂಗವಿಕಲರ ವಿದ್ಯಾಭ್ಯಾಸ ಹಾಗೂ ನಿರ್ವಹಣಾ ವೆಚ್ಚವನ್ನು ಭರಿಸಲು ಹಿಂದೂಸ್ತಾನಿ ಮ್ಯೂಸಿಕಲ್ ಸ್ಕೂಲ್ ಸಹಯೋಗದೊಂದಿಗೆ ನಡೆಸುತ್ತಿದ್ದು, ಈ ಸಂಸ್ಥೆಯು ಹಲವಾರು ಅಂಧ, ಅಂಗವಿಕಲರ ಮಕ್ಕಳ ಅಭಿವೃದ್ಧಿಗಾಗಿ ದುಡಿಯುತ್ತಿದೆ ಹಾಗೂ ಹಲವರಿಗೆ ಉಚಿತ ಊಟ ಹಾಗೂ ವಸತಿ ಸೌಲಭ್ಯ ಜೊತೆಗೆ ಸಂಗೀತ ವಿದ್ಯಾಭ್ಯಾಸ, ಚಲನವಲನ ಮತ್ತು ಕಂಪ್ಯೂಟರ್ ತರಬೇತಿ ನೀಡುತ್ತಾ ಅವರು ಸ್ವಾವಲಂಬನೆ ಬದುಕು ಕಟ್ಟಿಕೊಳ್ಳಲು  ಅವಕಾಶ ಕಲ್ಪಿಸುತ್ತಿದ್ದೇವೆ ಎಂದು ತಿಳಿಸಿದರು.

ಅಂದು ನಡೆಯುವ ಸಂಗೀತ ಕಾರ್ಯಕ್ರಮದಲ್ಲಿ ಕರ್ನಾಟಿಕ್ ಸಂಗೀತವನ್ನು ಪದ್ಮನಾಭ ಅವರು ಹಾಗೂ ಹಿಂದೂಸ್ತಾನಿ ಸಂಗೀತವನ್ನು ಸಂಗೀತ ರತ್ನ ಸಂತ್‍ಕುಮಾರ್ ನಡೆಸಿಕೊಡುವುದಾಗಿ ಹೇಳಿದರು.

ವಿಭಿನ್ನ ಸಂಗೀತ ಕಾರ್ಯಕ್ರಮದ ರಸದೌತಣ ಸವಿಯಲು ಸಂಗೀತ ಪ್ರಿಯರಿಗೆ ಇದೊಂದು ಒಳ್ಳೆಯ ಅವಕಾಶ ಎಂದು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ