ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್‍ನಲ್ಲಿ ಹೋಗುತ್ತಿದ್ದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ

ಬೆಂಗಳೂರು, ಫೆ.11-ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್‍ನಲ್ಲಿ ಹೋಗುತ್ತಿದ್ದ ಯುವಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ಕೆಜೆಹಳ್ಳಿ ಸಂಚಾರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮೃತನನ್ನು ಯೋಗಾನಂದ ಎಂದು ತಿಳಿದುಬಂದಿದೆ.

ಇಂದು ಮುಂಜಾನೆ ಎಚ್‍ಬಿಆರ್ ಲೇಔಟ್ ಬಳಿ ಈ ದುರ್ಘಟನೆ ಸಂಭವಿಸಿದ್ದು , ಮೃತ ಯುವಕ ಸ್ಥಳೀಯ ಕಂಪನಿಯಲ್ಲಿ ಉದ್ಯೋಗಿ ಎಂದು ತಿಳಿದುಬಂದಿದೆ.

ರಾತ್ರಿ ಪಾಳೆಯ ಕೆಲಸ ಮುಗಿಸಿ ಬೆಳಗ್ಗೆ ಸ್ನೇಹಿತನನ್ನು ಭೇಟಿ ಮಾಡಲು ಬೈಕ್‍ನಲ್ಲಿ ಹೋಗುತ್ತಿದ್ದಾಗ ಹಿಂದಿನಿಂದ ಬಂದ ಲಾರಿ ಅವರಿಗೆ ಡಿಕ್ಕಿ ಹೊಡೆದು ಹರಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ಪೆÇಲೀಸರು ತಿಳಿಸಿದ್ದಾರೆ.
ಕೆಜೆಹಳ್ಳಿ ಸಂಚಾರಿ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ