“ಜವಾರಿ ಕೋಳಿ ತಿಂದು ನರಸಿಂಹ ಸ್ವಾಮಿ ದರ್ಶನ ಪಡೆಯೋ ಎಲೆಕ್ಷನ್ ಹಿಂದೂ” ರಾಹುಲ್ ಗಾಂಧಿ ವಿರುದ್ಧ ಟ್ವೀಟ್ ವಾರ್ ಮುಂದವರೆಸಿರುವ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು, ಫೆ.13- ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಕರ್ನಾಟಕ ಪ್ರವಾಸ ಮುಂದುವರೆದಿರುವಂತೆಯೇ ಅವರ ವಿರುದ್ಧ ಟ್ವೀಟ್ ವಾರ್ ಮುಂದವರೆಸಿರುವ ಬಿಜೆಪಿ ರಾಜ್ಯಾದ್ಯಕ್ಷ ಬಿ.ಎಸ್.ಯಡಿಯೂರಪ್ಪ ಜವಾರಿ ಕೋಳಿ ತಿಂದು ನರಸಿಂಹ ಸ್ವಾಮಿ ದರ್ಶನ ಪಡೆಯೋ ರಾಹುಲ್ ಎಲೆಕ್ಷನ್ ಹಿಂದೂ ಎಂದು ವ್ಯಂಗ್ಯವಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಬಿಎಸ್ ಯಡಿಯೂರಪ್ಪ ಅವರು, ಪತ್ರಿಕೆಗಳ ಎರಡು ವರದಿಗಳನ್ನು ಹಿನ್ನಲೆಯಾಗಿಸಿಕೊಂಡು ಟ್ವೀಟ್ ಮಾಡಿದ್ದು, ಜವಾರಿ ಕೋಳಿ ತಿಂದು ನರಸಿಂಹ ಸ್ವಾಮಿ ದರ್ಶನ ಪಡೆಯೋ ರಾಹುಲ್ ಎಲೆಕ್ಷನ್ ಹಿಂದೂ ಎಂದು ಕಿಡಿಕಾರಿದ್ದಾರೆ.

ಅಂತೆಯೇ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧವೂ ಹರಿಹಾಯ್ದಿರುವ ಬಿಎಸ್‍ವೈ, ಮೀನು ತಿಂದು ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಪ್ರತಿ ಬಾರಿ ಏಕೆ ಹಿಂದೂಗಳ ಭಾವನೆಗಳಿಗೆ ಧಕ್ಕೆ ತರುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಮೀನು ತಿಂದು ಧರ್ಮಸ್ಥಳ ಮಂಜುನಾಥನ ದರ್ಶನ ಪಡೆಯೋ ಸಿಎಂ ಸಿದ್ದರಾಮಯ್ಯ ಒಂದೆಡೆಯಾದರೆ, ಜವಾರಿ ಕೋಳಿ ತಿಂದು ನರಸಿಂಹ ಸ್ವಾಮಿಯ ದರ್ಶನ ಪಡೆಯೋ ಎಲೆಕ್ಷನ್ ಹಿಂದೂ ರಾಹುಲ್ ಗಾಂಧಿ ಮತ್ತೊಂದು ಕಡೆ. ಪ್ರತಿ ಬಾರಿ ಏಕೆ ಹಿಂದೂಗಳ ಭಾವನೆಗಳಿಗೆ ಕಾಂಗ್ರೆಸ್ ಧಕ್ಕೆ ತರುತ್ತಿದೆ? ಎಲ್ಲರನ್ನೂ ಸಮನಾಗಿ ಕಾಣುವುದು ಸಮಾಜವಾದ, ನಿಮ್ಮದು ಮಜಾ ವಾದ ಎಂದು ವ್ಯಂಗ್ಯವಾಡಿದ್ದಾರೆ.

ಮೀನು ತಿಂದು ಧರ್ಮಸ್ಥಳ ಮಂಜುನಾಥನ ದರ್ಶನ ಪಡೆಯೋದು ಒಂದೆಡೆಯಾದರೆ, ಜವಾರಿ ಕೋಳಿ ತಿಂದು ನರಸಿಂಹ ಸ್ವಾಮಿಯ ದರ್ಶನ ಪಡೆಯೋದು ಮತ್ತೊಂದು ಕಡೆ.

ಪ್ರತಿ ಬಾರಿ ಏಕೆ ಹಿಂದೂಗಳ ಭಾವನೆಗಳಿಗೆ ಕಾಂಗ್ರೆಸ್ ಧಕ್ಕೆ ತರುತ್ತಿದೆ? ಎಲ್ಲರನ್ನೂ ಸಮನಾಗಿ ಕಾಣುವುದು ಸಮಾಜವಾದ, ನಿಮ್ಮದು ಮಜಾ ವಾದ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ