ಅತಿ ವೇಗವಾಗಿ ಬಂದ ತಮಿಳುನಾಡಿನ ಖಾಸಗಿ ಬಸ್ ಬೈಕ್‍ಗೆ ಡಿಕ್ಕಿ ಸವಾರ ಸ್ಥಳದಲ್ಲೇ ಮೃತ್ಯು

ಬೆಂಗಳೂರು, ಫೆ.13- ಅತಿ ವೇಗವಾಗಿ ಬಂದ ತಮಿಳುನಾಡಿನ ಖಾಸಗಿ ಬಸ್ ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಜೆಪಿ ನಗರ ನಿವಾಸಿ ಶಿವಕುಮಾರ್‍ಸಿಂಗ್ (28) ಮೃತಪಟ್ಟ ಬೈಕ್ ಸವಾರ.

ಬಸವನಗುಡಿಯಲ್ಲಿ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಇವರು ನಿನ್ನೆ ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಬೈಕ್‍ನಲ್ಲಿ ಹೋಗುತ್ತಿದ್ದರು. ಎಲೆಕ್ಟ್ರಾನಿಕ್‍ಸಿಟಿಯ ಫೇಸ್-2 ರ್ಯಾಂಪ್-4 ಬಳಿ ಅತಿ ವೇಗವಾಗಿ ಬಂದ ತಮಿಳುನಾಡಿನ ಖಾಸಗಿ ಬಸ್ ಇವರ ಬೈಕ್‍ಗೆ ಡಿಕ್ಕಿ ಹೊಡೆದಿದೆ.

ಪರಿಣಾಮವಾಗಿ ಕೆಳಗೆ ಬಿದ್ದು ಗಂಭೀರ ಗಾಯಗೊಂಡ ಶಿವಕುಮಾರ್‍ಸಿಂಗ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತ ಸಂಭವಿಸುತ್ತಿದ್ದಂತೆ ಚಾಲಕ ಬಸ್ ಬಿಟ್ಟು ಪರಾರಿಯಾಗಿದ್ದಾನೆ. ಸುದ್ದಿ ತಿಳಿದ ಎಲೆಕ್ಟ್ರಾನಿಕ್ ಸಿಟಿ ಪೆÇಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿ ಶವವನ್ನು ಸೆಂಟ್‍ಜಾನ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

(ಫೋಟೋವನ್ನು ಪ್ರತಿನಿಧಿಸುವುದಕ್ಕಾಗಿ ಮಾತ್ರ ಇರಿಸಲಾಗುತ್ತದೆ)

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ