ಭಾಜಪ ಗಾಂಧಿನಗರ ಮಂಡಲದ ವತಿಯಿಂದ ಇಂದು ಮಹಾ ಶಿವರಾತ್ರಿಯನ್ನು ವಿಶೇಷವಾಗಿ ಆಚರಿಸಲಾಯಿತು

ಬೆಂಗಳೂರು, ಫೆ.14- ಭಾರತೀಯ ಜನತಾ ಪಕ್ಷ ಕರ್ನಾಟಕ ಗಾಂಧಿನಗರ ಮಂಡಲದ ವತಿಯಿಂದ ಇಂದು ಮಹಾ ಶಿವರಾತ್ರಿಯನ್ನು ವಿಶೇಷವಾಗಿ ಆಚರಿಸಲಾಯಿತು. ಗಾಂಧಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಶಿವ ದೇವಾಲಯಗಳಲ್ಲಿ ರುದ್ರಾಭೀಷೇಕ, ಲಕ್ಷ ಬಿಲ್ವಾರ್ಚನೆ, ನಾಲ್ಕು ಯಾಮ ಪೂಜೆ ಹಾಗೂ 1 ಲಕ್ಷ ಲಾಡೂ ಪ್ರಸಾದ ವಿತರಣೆಯನ್ನು ಹಮ್ಮಿಕೊಳ್ಳಲಾಗಿತ್ತು.

ಗಾಂಧಿನಗರ ವಿಧಾನಸಭಾ ಕ್ಷೇತ್ರ ಉಸ್ತುವಾರಿ ಎಂ.ಬಿ ಶಿವಪ್ಪ ಅವರು ಬಳೇಪೇಟೆ ವೃತ್ತದಲ್ಲಿರುವ ಕಾಶಿವಿಶ್ವೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಆಯೋಜಿಸಿದ್ದರು.

ನಂತರ ಮಾತನಾಡಿದ ಅವರು, ರಾಜ್ಯದ ಜನತೆಗೆ ಒಳ್ಳೆಯದಾಗಲಿ ಎನ್ನುವ ದೃಷ್ಟಿಯಿಂದ ಪೂಜಾ ಕಾರ್ಯವನ್ನು ಆಯೋಜಿಲಾಗಿತ್ತು. ಮುಂಬರುವ ಚುನಾವಣೆಯಲ್ಲಿ ಬಿ ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಪಕ್ಷ ಅಧಿಕಾರ ಚುಕ್ಕಾಣಿ ಹಿಡಿಯುವ ಮೂಲಕ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕಾಣುವ ಖುಷಿ ನಮ್ಮದಾಗಿರಲಿದೆ ಎಂದು ಹೇಳಿದರು.

ಅಲ್ಲದೆ, ಗಾಂಧಿನಗರ ವಿಧಾನಸಭಾ ಕ್ಷೇತ್ರದ ಎಲ್ಲಾ ದೇವಾಲಯಗಳಲ್ಲೂ 1 ಲಕ್ಷ ಲಾಡೂ ಹಂಚುವ ಕಾರ್ಯಕ್ರಮಕ್ಕೂ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಗಾಂಧಿನಗರ ಕ್ಷೇತ್ರದ ನೂರಾರು ಕಾರ್ಯಕರ್ತರು ಹಾಗೂ ಭಕ್ತರು ಪಾಲ್ಗೊಂಡಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ