ಬೆಂಕಿ ತಗುಲಿ ತೆಂಗು ಅಡಿಕೆ ಸೇರಿದಂತೆ ಅಪಾರ ಪ್ರಮಾಣದ ಬೆಳೆ ನಷ್ಟ

ತುರುವೇಕೆರೆ, ಫೆ.15-ಆಕಸ್ಮಿಕ ಬೆಂಕಿ ತಗುಲಿ ತೆಂಗು ಅಡಿಕೆ ಸೇರಿದಂತೆ ಅಪಾರ ಪ್ರಮಾಣದ ಬೆಳೆ ನಷ್ಟವಾಗಿರುವ ಘಟನೆ ತಾಲೂಕಿನ ಮಾದಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ತಾಲೂಕಿನ ಮಾದೀಹಳ್ಳಿ ಗ್ರಾಮದ ಕೆಂಪೇಗೌಡ ಎಂಬುವವರ ತೋಟಕ್ಕೆ ನಿನ್ನೆ ಮಧ್ಯಾಹ್ನ 3.30ರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ದಾರಿಹೋಕರು ನೀಡಿದ ಸುಳಿವಿನ ಮೇರೆಗೆ ಗ್ರಾಮಸ್ಥರೆಲ್ಲ ಸೇರಿ ಬೆಂಕಿ ನಂದಿಸಲು ಶ್ರಮಿಸಿದರೂ ಸಾಧ್ಯವಾಗದ್ದರಿಂದ ಅಗ್ನಿಶಾಮಕದಳಕ್ಕೆ ಕರೆ ಮಾಡಿ ಕರೆಸಿಕೊಳ್ಳಲಾಗಿದೆ.

ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವುದರೊಳಗೆ 50 ಅಡಿಕೆ, 15 ತೆಂಗು, 50 ಮೆಣಸು, ದಾಲ್ಚಿನ್ನಿ,ತೇಗ ಬೆಂಕಿಗಾಹುತಿಯಾಗಿದ್ದು ಅಪಾರ ಪ್ರಮಾಣದ ನಷ್ಟ ಉಂಟಾಗಿದೆ.

ತೋಟದೊಳಗೆ ದೊಡ್ಡ ಹಾಗೂ ಚಿಕ್ಕ ವಿದ್ಯುತ್ ಲೈನ್ ಹಾದುಹೋಗಿದ್ದು ಇದರ ತೆರವಿಗೆ ಅನೇಕ ಬಾರಿ ಮನವಿ ಮಾಡಿದ್ದರೂ ಸಹಾ ಯಾವುದೇ ಪ್ರಯೋಜನವಾಗದೆ ವೈರುಗಳು ಜಗ್ಗಿರುವುದರಿಂದ ಒಂದಕ್ಕೊಂದು ಸ್ಪರ್ಶಿಸಿ ಈ ಅನಾಹುತ ಸಂಭವಿಸಿರಬಹುದು ಎಂದು ತೋಟದ ಮಾಲೀಕ ಪಾರ್ಥಸಾರಥಿ ತಿಳಿಸಿದ್ದಾರೆ.

 

(ಫೋಟೋ ನಿರೂಪಣೆಗಾಗಿ ಮಾತ್ರ ಸೇರಿಸಲಾಗಿದೆ)

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ