ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆ ಅ.31ರಂದು ಉದ್ಘಾಟನೆ

ವಡೋದರಾ:ಫೆ-15: ಗುಜರಾತ್ನ ಸರ್ದಾರ್ ಸರೋವರ್ ಅಣೆಕಟ್ಟು ಬಳಿಯ ಸಾಧು ಬೆಟ್ನಲ್ಲಿ ನಿರ್ವಿುಸಲಾಗುತ್ತಿರುವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 182 ಮೀಟರ್ ಎತ್ತರದ ಏಕತಾ ಪ್ರತಿಮೆ ಅ.31ರಂದು ಉದ್ಘಾಟನೆಯಾಗಲಿದೆ. ಅದೇ ದಿನ ಸರ್ದಾರ್ ಪತೇಲರ 143ನೇ ಜನ್ಮದಿನವಾಗಿದ್ದು, ಅಂದೇ ಪ್ರತಿಮೆ ಉದ್ಘಾಟನೆಗೆ ಸರ್ಕಾರ ತೀರ್ಮಾನಿಸಿದೆ.

ಉಕ್ಕಿನ ಮನುಷ್ಯ ಖ್ಯಾತಿಯ ಪಟೇಲ್ ಅವರ ಪ್ರತಿಮೆ ನಿರ್ಮಾಣ ಕಾರ್ಯ ಭರದಿಂದ ಸಾಗಿದ್ದು, ಗುಜರಾತ್ ಮುಖ್ಯ ಕಾರ್ಯದರ್ಶಿ ಜೆ. ಎನ್. ಸಿಂಗ್ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದ್ದಾರೆ. ನಿಗದಿತ ಅವಧಿಯೊಳಗೆ ಕಾರ್ಯ ಪೂರ್ಣಗೊಳಿಸಿ, ಪ್ರತಿಮೆ ಉದ್ಘಾಟಿಸಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ. ಏಕತಾ ಪ್ರತಿಮೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಕನಸಿನ ಯೋಜನೆಯಾಗಿದೆ. 2013ರ ಅ. 31ರಂದು ಪ್ರಧಾನಿ ಮೋದಿ ಪಟೇಲ್ ಪ್ರತಿಮೆಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ಜಗತ್ತಿನ ಅತಿ ಎತ್ತರದ ಪ್ರತಿಮೆ ಇದಾಗಲಿದ್ದು, 3,000 ಕೋಟಿ ರೂ. ವೆಚ್ಚವಾಗಲಿದೆ.

ಫೋಟೋ ಕ್ರೆಡಿಟ್: Scroll.in (ಪ್ರಾತಿನಿಧ್ಯಕ್ಕಾಗಿ ಮಾತ್ರ)

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ