ಸಿಎಂ ಸಿದ್ದರಾಮಯ್ಯರಿಂದ ರಾಜ್ಯ ಬಜೆಟ್ ಮಂಡನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ 2018-19ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಇದು 13ನೇ ಬಜೆಟ್ ಮಂಡನೆಯಾಗಿದೆ. ಬಜೆಟ್ ಪ್ರಾರಂಭಿಸಿದ ಸಿಎಂ ಸಿದ್ದರಾಮಯ್ಯ ನಾನು ಅರ್ಥಶಾಸ್ತ್ರಜ್ಞ ಓದಿದವನಲ್ಲ, ಆದರೆ ಅರ್ಥಶಾಸ್ತ್ರಜ್ಞರ ಜತೆಗೆ ಚರ್ಚೆ ನಡೆಸಿ ತಿಳಿದುಕೊಂಡಿದ್ದೇನೆ. ಆದ್ದರಿಂದ ನನ್ನಲ್ಲಿ ಆತ್ಮ ವಿಶ್ವಾಸ ಹೆಚ್ಚಾಗಿದೆ ಎಂದು ಹೇಳಿದರು.

ಪ್ರಸಕ್ತ ಬಜೆಟ್ ನಲ್ಲಿ ಕೃಷಿ ವಲಯಕ್ಕೆ ಬಂಪರ್ ಕೊಡುಗೆ ನೀಡಿದ್ದು, ಮಹಿಳೆಯರು ಹಾಗೂ ಮಕ್ಕಳಿಗಾಗಿ ವಿಶೇಷ ಸೌಲಭ್ಯಗಳನ್ನು ನೀಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ