ಕಾವೇರಿ ತೀರ್ಪು ಹಿನ್ನೆಲೆಯಲ್ಲಿ ತಮಿಳುನಾಡಿಗೆ ನಗರದಿಂದ ಬಸ್ ಸಂಚಾರ ಸ್ಥಗಿತ

ಮೈಸೂರು, ಫೆ.16-ಕಾವೇರಿ ತೀರ್ಪು ಹಿನ್ನೆಲೆಯಲ್ಲಿ ಇಂದು ಬೆಳಗ್ಗೆಯಿಂದಲೇ ತಮಿಳುನಾಡಿಗೆ ನಗರದಿಂದ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ಗ್ರಾಮಾಂತರ ಬಸ್ ನಿಲ್ದಾಣದಿಂದ ಕರ್ನಾಟಕ-ತಮಿಳುನಾಡು ಗಡಿ ಭಾಗದವರೆಗೂ ಮಾತ್ರ ಬಸ್‍ಗಳನ್ನು ಬಿಡಲಾಗಿದೆ. ತಮಿಳುನಾಡಿಗೆ ಹೋಗಬೇಕಾದ ಪ್ರಯಾಣಿಕರು ಗಡಿಭಾಗದಲ್ಲಿ ಇಳಿದು ಅಲ್ಲಿಂದ ತಮಿಳುನಾಡಿಗೆ ತೆರಳಬೇಕಾಗಿದೆ.
ಈ ವಿಷಯ ತಿಳಿಯದೇ ತಮಿಳುನಾಡಿಗೆ ತೆರಳುವ ಪ್ರಯಾಣಿಕರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ