ಆಸ್ಪತ್ರೆಯ ಅವಾಂತರ ಪ್ರಶ್ನಿಸಿದ ರೋಗಿಯ ಮಗನ ಮೇಲೆ ಹಲ್ಲೆ

ಚಿಕ್ಕಬಳ್ಳಾಪುರ, ಫೆ. 17-ಆಸ್ಪತ್ರೆಯ ಅವಾಂತರ ಪ್ರಶ್ನಿಸಿದ ರೋಗಿಯ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.

ಆಂಧ್ರದ ಪ್ರಕಾಶಂ ಜಿಲ್ಲೆ ಗೆದ್ದಲೂರು ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿ ನಾಲ್ವರು ಮೃತಪಟ್ಟು 40 ಮಂದಿ ಗಾಯಗೊಂಡಿದ್ದರು.

ಗಾಯಾಳುಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಗಂಭೀರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿರುವ ರೋಗಿಗಳಿಗೆ ಶೀಘ್ರವಾಗಿ ಮತ್ತು ಸೂಕ್ತ ಚಿಕಿತ್ಸೆ ನೀಡುತ್ತಿಲ್ಲವೆಂದು ಬೇಸರಗೊಂಡು ಪ್ರಶ್ನಿಸಿದ್ದಕ್ಕೆ ಆಸ್ಪತ್ರೆ ಸಿಬ್ಬಂದಿ ರೋಗಿಯ ಮಗನ ಮೇಲೆ ಹಲ್ಲೆ ನಡೆಸಿದ್ದಾರೆ.

ಇದರಿಂದ ರೊಚ್ಚಿಗೆದ್ದ ರೋಗಿಗಳ ಕುಟುಂಬಸ್ಥರು, ಸಂಬಂಧಿಕರು ಹಾಗೂ ಸಾರ್ವಜನಿಕರು ಆಸ್ಪತ್ರೆ ಅವ್ಯವಸ್ಥೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಫೋಟೋ ಕ್ರೆಡಿಟ್: TheJournal.ie (ಪ್ರಾತಿನಿಧ್ಯಕ್ಕಾಗಿ ಮಾತ್ರ)

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ