ಹಾಡಹಗಲೇ ಮಹಿಳೆಯ ಹಿಂಬಾಲಿಸಿದ ಸರಗಳ್ಳರು 70 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿ

ಬೆಂಗಳೂರು, ಫೆ.17- ಹಾಡಹಗಲೇ ಮಹಿಳೆಯ ಹಿಂಬಾಲಿಸಿದ ಸರಗಳ್ಳರು 70 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿರವ ಘಟನೆ ಹುಳಿಮಾವು ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಿನ್ನೆ ಮಧ್ಯಾಹ್ನ 2 ಗಂಟೆ ಸಮಯದಲ್ಲಿ ಮಣಿಮಾಲಾ ಎಂಬುವರು ಅಕ್ಷಯನಗರದ ಎಲ್ಲೇನಹಳ್ಳಿಯ ಕಾಲೇಜು ರಸ್ತೆ ಬಳಿ ನಡೆದು ಹೋಗುತ್ತಿದ್ದರು.

ಈ ಸಂದರ್ಭದಲ್ಲಿ ಬೈಕ್‍ನಲ್ಲಿ ಹಿಂಬಾಲಿಸಿದ ಸರಗಳ್ಳರು ಸಮಯ ಸಾಧಿಸಿ 70 ಗ್ರಾಂ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ.
ಹುಳಿಮಾವು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸರಗಳ್ಳರ ಬೇಟೆಗೆ ಮುಂದಾಗಿದ್ದಾರೆ.

 

(ಪ್ರಾತಿನಿಧ್ಯಕ್ಕಾಗಿ ಮಾತ್ರ ಪೋಸ್ಟ್ ಮಾಡಲಾದ ಫೋಟೋ, ಮೂಲವಲ್ಲ)

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ