ವಿಕಾಸಪರ್ವ ಯಾತ್ರೆಗೆ ರಾಜ್ಯಾದ್ಯಂತ ಉತ್ತಮ ಸ್ಪಂದನೆ

ಬೆಂಗಳೂರು, ಫೆ.17-ಜನಪರ ಹಾಗೂ ರೈತಪರ ಕಾಳಜಿಯೊಂದಿಗೆ ಕುಮಾರಸ್ವಾಮಿ ಅವರು ಕೈಗೊಂಡಿರುವ ವಿಕಾಸಪರ್ವ ಯಾತ್ರೆಗೆ ರಾಜ್ಯಾದ್ಯಂತ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು , ಜೆಡಿಎಸ್ ಅಧಿಕಾರ ಹಿಡಿಯುವುದು ಖಚಿತ ಎಂದು ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಆಕಾಂಕ್ಷಿ ಅಭ್ಯರ್ಥಿ ಹಾಗೂ ಜೆಡಿಎಸ್ ಮುಖಂಡ ಓಂಪ್ರಕಾಶ್ ಹೇಳಿದ್ದಾರೆ.

ಇಂದು ಗಾಯತ್ರಿನಗರದ ಮರಿಯಪ್ಪನ ಪಾಳ್ಯದ ಗಣೇಶ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಸಿ ವಿಕಾಸಪರ್ವದ ಬೈಕ್ ರ್ಯಾಲಿಗೆ ಚಾಲನೆ ನೀಡಿ ಮಾತನಾಡಿದ ಅವರು, ಹಿಂದೆ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಕೈಗೊಂಡ ಹಲವು ಅಭಿವೃದ್ಧಿ ಕಾಮಗಾರಿಗಳು ಜನರ ಸ್ಪಂದಿತ ಯೋಜನೆಗಳು ಇಂದಿಗೂ ಕೂಡ ಎಲ್ಲರು ನೆನೆಯುತ್ತಾರೆ.

ಮುಂದೆ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‍ಗೆ ಜನರ ಆಶೀರ್ವಾದ ಮಾಡಲಿದ್ದಾರೆ. ಮಲ್ಲೇಶ್ವರಂ ಕ್ಷೇತ್ರದಲ್ಲಿ ಇಂದು ಸಾವಿರಾರು ಮಂದಿ ಕುಮಾರಣ್ಣ ಅವರಿಗೆ ಬೆಂಬಲ ಸೂಚಿಸಿ ನನ್ನ ಜೊತೆಗೂಡಿದ್ದಾರೆ. ಇನ್ನಷ್ಟು ಹುಮ್ಮಸ್ಸಿನಿಂದ ಜನಪರ ಕಾರ್ಯಗಳಲ್ಲಿ ತೊಡಗುತ್ತೇನೆ ಎಂದು ತಿಳಿಸಿದರು.

ಮಲ್ಲೇಶ್ವರಂ ಕ್ಷೇತ್ರದಿಂದ ಸ್ಪರ್ಧಿಸುವಂತೆ ನನಗೆ ಹಲವಾರು ಸಂಘಟನೆಗಳು, ಮುಖಂಡರು ಒತ್ತಾಯಿಸಿದ್ದರು. ಅದರಂತೆ ಕುಮಾರಸ್ವಾಮಿ ಹಾಗೂ ದೇವೇಗೌಡರ ಬಳಿಯೂ ಈ ಬಗ್ಗೆ ಚರ್ಚಿಸಿದ್ದೇನೆ. ಒಳ್ಳೆಯ ಕೆಲಸಕ್ಕೆ ಜನರು ಸಹಕಾರ ನೀಡುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ಹೇಳಿದರು.

 

ಫೋಟೋ ಕ್ರೆಡಿಟ್: Star of Mysore (ಪ್ರಾತಿನಿಧ್ಯಕ್ಕಾಗಿ ಮಾತ್ರ)

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ