ಡಾ.ಯತೀಂದ್ರ ಅವರಿಗೆ ಗೆಜ್ಜಗಳ್ಳಿಯ ಗ್ರಾಮಸ್ಥರು ಘೇರಾವ್ ಹಾಕಿದರು

ಮೈಸೂರು, ಫೆ.18-ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ಡಾ.ಯತೀಂದ್ರ ಅವರಿಗೆ ಗೆಜ್ಜಗಳ್ಳಿಯ ಗ್ರಾಮಸ್ಥರು ಘೇರಾವ್ ಹಾಕಿದ ಪ್ರಸಂಗ ನಡೆದಿದೆ.

ಯತೀಂದ್ರ ಅವರು ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಯ ಗೆಜ್ಜಗಳ್ಳಿಯಲ್ಲಿ ಇಂದು 15 ಲಕ್ಷ ರೂ. ವೆಚ್ಚದ ಕಾಮಗಾರಿಯೊಂದಕ್ಕೆ ಗುದ್ದಲಿ ಪೂಜೆ ನೆರವೇರಿಸಲು ತೆರಳಿದ್ದರು. ಈ ವೇಳೆ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.

ಚುನಾವಣಾ ಸಂದರ್ಭದಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗುದ್ದಲಿ ಪೂಜೆ ನೀವೇಕೆ ಮಾಡಬೇಕು ಎಂದು ಜೆಡಿಎಸ್ ಕಾರ್ಯಕರ್ತರು ಯತೀಂದ್ರ ಅವರನ್ನು ಪ್ರಶ್ನಿಸಿದ್ದಾರೆ.

ಈ ವೇಳೆ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆದು ಜೆಡಿಎಸ್‍ನವರು ಯತೀಂದ್ರ ಅವರಿಗೆ ಗುದ್ದಲಿಪೂಜೆ ನಡೆಸದಂತೆ ಘೆರಾವ್ ಹಾಕಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ