ರಾಜ್ಯದಲ್ಲಿ ಗೂಂಡಾವರ್ತನೆ, ರಾಕ್ಷಸಿ ಕೃತ್ಯಗಳು – ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಟೀಕೆ

ಬೆಂಗಳೂರು, ಫೆ.20- ರಾಜ್ಯದಲ್ಲಿ ಗೂಂಡಾವರ್ತನೆ, ರಾಕ್ಷಸಿ ಕೃತ್ಯಗಳು ನಡೆಯುತ್ತಿವೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಇಂದಿಲ್ಲಿ ಟೀಕಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆÇಲೀಸರ ಸಮ್ಮುಖದಲ್ಲೇ ಆರೋಪಿ ಮೊಹಮ್ಮದ್ ನಲಪಾಡ್ ಕಡೆಯವರು ಮಾಧ್ಯಮದವರ ಮೇಲೆ ಹಲ್ಲೆ ಮಾಡಿದ್ದಾರೆ. ಶಾಂತಿನಗರ ಅಶಾಂತಿನಗರವಾಗಿದೆ ಎಂದು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಮುಖಂಡ ನಾರಾಯಣಸ್ವಾಮಿ ಎಂಬುವರು ಸ್ಥಳೀಯ ಬಿಬಿಎಂಪಿ ಕಚೇರಿಯನ್ನು ಸುಡುವ ಯತ್ನ ಮಾಡಿದ್ದಾರೆ. ಬ್ಯಾಟರಾಯನಪುರದಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿದೆ. ಇದೆಲ್ಲಾ ನೋಡಿದರೆ ರಾಜ್ಯದಲ್ಲಿ ಗೂಂಡಾವರ್ತನೆ, ರಾಕ್ಷಿಸಿ ಕೃತ್ಯಗಳು ಹೆಚ್ಚಾಗಿ ಕಂಡು ಬಂದಿದ್ದು, ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿದರು.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ