ಬೆಂಗಳೂರು: ಬಸ್ ಒಳ ನುಗ್ಗಿ ವ್ಯಕ್ತಿಯ ಬರ್ಬರ ಹತ್ಯೆ

ಬೆಂಗಳೂರುಬೆಂಗಳೂರಿನಲ್ಲೇ ಹಾಡಹಗಲೇ ಬೆಚ್ಚಿ ಬೀಳಿಸುವ ದುಷ್ಕೃತ್ಯವೊಂದು ನಡೆದಿದೆ. ಮೂವರು ದುಷ್ಕರ್ಮಿಗಳು ಬಿಎಂಟಿಸಿ ಬಸ್‌ ಒಳಗೆ ನುಗ್ಗಿ  ವ್ಯಕ್ತಿಯೊಬ್ಬನನ್ನು ಇರಿದು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದಾರೆ.

ಅತ್ತಿಬೆಲೆಯಿಂದ ನಗರಕ್ಕೆ ಬರುತ್ತಿದ್ದ ಬಸ್ ಅನ್ನು ಚಂದಾಪುರದಿಂದ ಬೆಂಬತ್ತಿದ ಮೂವರು  ಇಲೆಕ್ಟ್ರಾನಿಕ್‌ ಸಿಟಿಯ ಕೋನಪ್ಪನ ಅಗ್ರಹಾರ ಬಳಿ ಬಸ್‌ ನಿಲ್ಲುತ್ತಿದ್ದಂತೆ ಒಳ ನುಗ್ಗಿದ ಮೂವರು ದುಷ್ಕರ್ಮಿಗಳು ಆಂಧ್ರ ಮೂಲದ 35 ವರ್ಷದ ವ್ಯಕ್ತಿಯನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ಇರಿತದಿಂದಾಗಿ ವ್ಯಕ್ತಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದ್ದಾರೆ. ಭೀಕರ ದೃಶ್ಯ ಕಂಡು ಬಸ್‌ನಲ್ಲಿದ್ದ ಪ್ರಯಾಣಿಕರು ಬೆಚ್ಚಿ ಬಿದ್ದಿದ್ದಾರೆ.

ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ