ನಿಂತಿದ್ದ ಲಾರಿಗೆ ಆ್ಯಂಬುಲೆನ್ಸ್ ಡಿಕ್ಕಿ ಪರಿಣಾಮ ರೋಗಿ ಸ್ಥಳದಲ್ಲೇ ಸಾವು

ಶಿರಾ, ಫೆ.21-ನಿಂತಿದ್ದ ಲಾರಿಗೆ ಆ್ಯಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ರೋಗಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಳ್ಳಂಬೆಳ್ಳ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.

ಶಿರಾ ನಗರದ ಗೌಳಿಗರಹಳ್ಳಿ ನಿವಾಸಿ ಆದಮ್‍ಸಾಬ್(50) ಮೃತದುರ್ದೈವಿ.

ನಿನ್ನೆ ರಾತ್ರಿ ಆದಮ್‍ಸಾಬ್ ಅವರಿಗೆ ರಕ್ತದೊತ್ತಡ ಕಡಿಮೆ ಆಗಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದವರನ್ನು ಕುಟುಂಬಸ್ಥರು ಶಿರಾ ಆಸ್ಪತ್ರೆಗೆ ದಾಖಲಿಸಿದ್ದರು. ರಾತ್ರಿಯಿಂದ ಚಿಕಿತ್ಸೆ ನೀಡಿದ ವೈದ್ಯರು ಇಂದು ಮುಂಜಾನೆ ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿಗೆ ಕರೆದೊಯ್ಯಲು ತಿಳಿಸಿದ್ದರು.

ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ರೋಗಿ ಅದಮ್‍ಸಾಬ್ ಅವರನ್ನು ಶಿರಾದಿಂದ ತುಮಕೂರಿಗೆ ಕರೆದೊಯ್ಯುವ ಮಾರ್ಗ ಮಧ್ಯೆ ಕಂಟ್ರಿ ಕ್ಲಬ್ ಮುಂಭಾಗದ ಮುಖ್ಯರಸ್ತೆಯಲ್ಲಿ ನಿಂತಿದ್ದ ಲಾರಿಗೆ ಆ್ಯಂಬುಲೆನ್ಸ್ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

ಆ್ಯಂಬುಲೆನ್ಸ್ ಚಾಲಕನ ಅಜಾಗರೂಕತೆಯಿಂದ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಕಳ್ಳಂಬೆಳ್ಳ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ