`ಆರೆಂಜ್’ ಆರಂಭ

ನಿಮ್ಮ ಸಿನಿಮಾ ಲಾಂಛನದಲ್ಲಿ ನವೀನ್ ಅವರು ನಿರ್ಮಿಸುತ್ತಿರುವ `ಆರೆಂಜ್` ಚಿತ್ರದ ಮುಹೂರ್ತ ಸಮಾರಂಭ ಫೆಬ್ರವರಿ 11ರಂದು ರಾಜರಾಜೇಶ್ವರಿ ನಗರದ ರಾಜರಾಜೇಶ್ವರಿ ದೇವಸ್ಥಾನದಲ್ಲಿ ನೆರವೇರಿತು.

ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸುತ್ತಿರುವ ಈ ಚಿತ್ರವನ್ನು ಪ್ರಶಾಂತ್ ರಾಜ್ ನಿರ್ದೇಶಿಸುತ್ತಿದ್ದಾರೆ. ಗಣೇಶ್ ಅವರು ಅಭಿನಯಿಸಿದ ಚಿತ್ರದ ಪ್ರಥಮ ಸನ್ನಿವೇಶಕ್ಕೆ ಶಿಲ್ಪ ಗಣೇಶ್ ಆರಂಭ ಫಲಕ ತೋರಿದರು. ಗಣೇಶ್ ಹಾಗೂ ಶಿಲ್ಪ ಗಣೇಶ್ ಅವರ ಹತ್ತನೇ ವಿವಾಹ ವಾರ್ಷಿಕೋತ್ಸವದ ದಿನದಂದೇ ಈ ಚಿತ್ರದ ಮುಹೂರ್ತ ನೆರವೇರಿರುವುದು ವಿಶೇಷ. ವಿತರಕ, ನಿರ್ಮಾಪಕ ನಿರಂಜನ್ ಹಾಗೂ ಪ್ರಶಾಂತ್ ಸಂಬರ್ಗಿ ಮುಂತಾದ ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.

ನಿರ್ದೇಶಕ ಪ್ರಶಾಂತ್ ರಾಜ್ ಅವರೆ ಕಥೆ, ಚಿತ್ರಕಥೆ ಬರೆದಿರುವ ಈ ಚಿತ್ರಕ್ಕೆ ಸಂತೋಷ್ ರೈ ಪತಾಜೆ ಅವರ ಛಾಯಾಗ್ರಹಣವಿದೆ. ರವಿಚಂದ್ರನ್ ಸಂಕಲನ, ರವಿವರ್ಮ ಸಾಹಸ ನಿರ್ದೇಶನ, ಮುರಳಿ ನೃತ್ಯ ಅವರ ನೃತ್ಯ ನಿರ್ದೇಶನವಿರುವ ಈ ಚಿತ್ರಕ್ಕೆ ನಟರಾಜ್ ಸಂಭಾಷಣೆ ಬರೆದಿದ್ದಾರೆ. ಗಣೇಶ್, ಸಾಧುಕೋಕಿಲ, ರಂಗಾಯಣ ರಘು, ರವಿಶಂಕರ್ ಗೌಡ, ಸುಧಾ ಬೆಳವಾಡಿ, ಪದ್ಮಜಾರಾವ್, ಅಶೋಕ್, ಗಣೇಶ್ ರಾವ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ