ನಡೆದು ಹೋಗುತ್ತಿದ್ದ ವ್ಯಕ್ತಿಯನ್ನು ದುಷ್ಕರ್ಮಿಗಳಿಬ್ಬರು ಚಾಕುವಿನಿಂದ ಕೊಲೆಗೆ ಯತ್ನ

ಬೆಂಗಳೂರು, ಫೆ.25- ರೈಲಿನಿಂದ ಇಳಿದು ನಡೆದು ಹೋಗುತ್ತಿದ್ದ ಕಲಬುರ್ಗಿಯ ವ್ಯಕ್ತಿಯನ್ನು ದುಷ್ಕರ್ಮಿಗಳಿಬ್ಬರು ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ಆರ್‍ಎಂಸಿ ಯಾರ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ 5.30ರ ಸಮಯದಲ್ಲಿ ನಡೆದಿದೆ.

ಕಲಬುರ್ಗಿಯ ಮಹದೇವಪ್ಪ ಇರಿತಕ್ಕೆ ಒಳಗಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೆÇಲೀಸರು ತಿಳಿಸಿದ್ದಾರೆ.

ಈತ ನಗರದ ಉಲ್ಲಾಳದಲ್ಲಿ ನೆಲೆಸಿದ್ದು, ಗಾರೆ ಕೆಲಸ ಮಾಡುತ್ತಿದ್ದಾನೆ. ಕಲಬುರ್ಗಿಗೆ ಹೋಗಿ ಯಶವಂತಪುರ ರೈಲು ನಿಲ್ದಾಣದಲ್ಲಿ ರೈಲಿನಿಂದ ಇಳಿದು ಬೆಳಗ್ಗೆ 5.30ರ ಸಮಯದಲ್ಲಿ ಮಾರಪ್ಪನಪಾಳ್ಯ ಸ್ಕೈ ವಾಕ್‍ನಲ್ಲಿ ನಡೆದು ಬರುತ್ತಿದ್ದಾಗ ಈ ಘಟನೆ ನಡೆದಿದೆ.

ಮಹದೇವಪ್ಪ ಬಂದ ರೈಲಿನಲ್ಲೇ ಮತ್ತೊಂದು ಬೋಗಿಯಲ್ಲಿ ಇಬ್ಬರು ವ್ಯಕ್ತಿಗಳು ಹಿಂಬಾಲಿಸಿ ಬಂದಿದ್ದು, ಆತನನ್ನು ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ.
ತಕ್ಷಣ ಮಹದೇವಪ್ಪನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಭೂ ವಿವಾದದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿರಬಹುದು ಎಂದು ಪೆÇಲೀಸರು ಶಂಕಿಸಿದ್ದಾರೆ.

ಆತನ ಪತ್ನಿ ನೀಡಿದ ದೂರಿನ ಮೇರೆಗೆ ಆರ್‍ಎಂಸಿ ಯಾರ್ಡ್ ಪೆÇಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ