ಮತ್ತೆ ಆಸ್ಪತ್ರೆಗೆ ದಾಖಲಾದ ಗೋವಾ ಸಿಎಂ ಪರಿಕ್ಕರ್

ನವದೆಹಲಿ:ಫೆ-26: ಇತ್ತೀಚೆಗಷ್ಟೇ ಅನಾರೋಗ್ಯದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದ ಗೋವಾ ಸಿಎಂ ಮನೋಹರ ಪರ್ರಿಕರ್ಗೆ ಪುನಃ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ನಿರ್ಜಲೀಕರಣ ಮತ್ತು ರಕ್ತದೊತ್ತಡ ಕಂಡುಬಂದ ಕಾರಣ ಪಣಜಿಯ ಜಿಎಂಸಿಎಚ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ಯಾಂಕ್ರಿಯಾಟಿಕ್ ಸಮಸ್ಯೆಯಿಂದ ಬಳಲುತ್ತಿದ್ದ ಪರ್ರಿಕರ್, ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಅವರನ್ನು ಫೆ. 22ರಂದು ಬಿಡುಗಡೆ ಮಾಡಲಾಗಿತ್ತು. ಆಸ್ಪತ್ರೆಯಿಂದ ಬಿಡುಗಡೆಗೊಂಡ ಮರುದಿನವೇ ಪರ್ರಿಕರ್ ವಿಧಾನಸಭೆಯಲ್ಲಿ ಬಜೆಟ್ ಕೂಡ ಮಂಡಿಸಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ