ಇನ್ಮುಂದೆ ಯಾರನ್ನಾದರೂ ಹೊಗಳುವ ಮುನ್ನ ಎಚ್ಚರ ವಹಿಸುತ್ತೇನೆ: ಪ್ರಕಾಶ್ ರೈ

ಮೈಸೂರು:ಫೆ-26: ಇನ್ಮುಂದೆ ನಾನು ಯಾರನ್ನಾದ್ರೂ ಹೊಗಳುವ ಮುನ್ನ ಎಚ್ಚರ ವಹಿಸುತ್ತೇನೆ. ಅವರ ಪೂರ್ವಾಪರ ತಿಳಿದು ಮಾತನಾಡುತ್ತೇನೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ನನ್ನ ಪ್ರೀತಿಸುವ ಜನರ ಕ್ಷಮೆ ಕೇಳುತ್ತೇನೆ ಎಂದು ನಟ ಪ್ರಕಾಶ್ ರೈ ತಿಳಿಸಿದ್ದಾರೆ.

ಶಾಸಕ ಎನ್ ಎ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದ ಪ್ರಕರಣ ನಡೆದ ಬಳಿಕ. ಹ್ಯಾರಿಸ್ ಪುತ್ರ ನಲಪಾಡ್ ನನ್ನು ಪ್ರಕಾಶ್ ರೈ ಹೊಗಳಿರುವ ವಿಡಿಯೋ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. ಈ ವಿಡಿಯೋ ಪ್ರಸಾರವಾದ ಬಳಿಕ ಪ್ರಕಾಶ್ ರೈ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮಾಡಲಾಗಿತ್ತು.

ಈ ನಿಟ್ಟಿನಲ್ಲಿ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಪ್ರಕಾಶ್ ರೈ, ನಲಪಾಡ್ ಕೇಸಲ್ಲಿ ನಿಜಕ್ಕೂ ಮುಜುಗರವಾಗಿದೆ. ಒಂದು ಗ್ರಾಮವನ್ನು ದತ್ತು ತೆಗೆದುಕೊಳ್ಳಲು ಹಣ ನೀಡಿದ್ದರು. ಈ ಕ್ಷಣದಲ್ಲಿ ನಾನು ಇಂಥ ಯುವಕರು ಇರಬೇಕು ಎಂದು ಹೇಳಿದ್ದೆ, ಆದರೆ ಆತನ ಮನಸ್ಸಲ್ಲೊಬ್ಬ ರಾಕ್ಷಸ ಇದ್ದಾನೆಂದು ಗೊತ್ತಿರಲಿಲ್ಲ ಎಂದು ಹೇಳಿದರು. ಇನ್ಮುಂದೆ ಯಾರನ್ನಾದರೂ ಹೊಗಳುವಾಗ ಎಚ್ಚರ ವಹಿಸುತ್ತೇನೆ. ಪೂರ್ವಾಪರ ತಿಳಿದು ಮಾತನಾಡುತ್ತೇನೆ ಎಂದು ರೈ ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ