ಶಾಸಕರಿಂದ ರಸ್ತೆ ಕಾಮಗಾರಿಗೆ ಚಾಲನೆ

ಶಾಸಕರಿಂದ ರಸ್ತೆ ಕಾಮಗಾರಿಗೆ ಚಾಲನೆ
ಬೀದರ,:- ನಗರದ ಆದರ್ಶ ಕಾಲೋನಿಯಲ್ಲಿ ನಗರಸಭೆಯಿಂದ ಕೈಗೊಂಡಿರುವ ಚರಂಡಿ ಮತ್ತು ರಸ್ತೆ ನಿರ್ಮಾಣ ಕಾಮಗಾರಿಗಳಿಗೆ ಶಾಸಕರು ಮತ್ತು ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾದ ರಹೀಮ್ ಖಾನ್ ಅವರು ಚಾಲನೆ ನೀಡಿದರು.
ಬೀದರ ನಗರಸಭೆಯಿಂದ 20 ಲಕ್ಷ ರೂ.ಗಳ ವೆಚ್ಚದಲ್ಲಿ ಬಾಲಾಜಿ ಅಡ್ವೊಕೇಟ್ ಮನೆಯಿಂದ ಬಾಬುರಾವ ಧೂಪತಮಹಾಗಾಂವ್ ಮನೆವರೆಗೆ ಸಿಸಿ ರಸ್ತೆ ನಿರ್ಮಾಣ ಮತ್ತು ಮೀನಾಕ್ಷಿ ಸಂಗ್ರಾಮ ಮನೆಯಿಂದ ದತ್ತಾತ್ರಿ ಕುಲಕರ್ಣಿ ಅವರ ಮನೆವರೆಗೆ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರಾದ ಶಾಲಿನಿ ರಾಜು ಚಿಂತಾಮಣಿ, ನಗರಸಭೆ ಸದಸ್ಯರಾದ ರೋಜ್ ಮೇರಿ, ಮುಖಂಡರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ