ದಲಿತ ಕುಟುಂಬವೊಂದರ ಮೇಲೆ ದಾಳಿ 12 ವರ್ಷದ ಬಾಲಕನೊಬ್ಬ ಮೃತ್ಯು

ವಿಳ್ಳುಪುರಂ, ಫೆ.27-ಅಪರಿಚಿತ ದುಷ್ಕರ್ಮಿಗೂ ದಲಿತ ಕುಟುಂಬವೊಂದರ ಮೇಲೆ ನಡೆಸಿದ ದಾಳಿಯಲ್ಲಿ 12 ವರ್ಷದ ಬಾಲಕನೊಬ್ಬ ಹತನಾಗಿ, ಆತನ ತಾಯಿ ಮತ್ತು 15 ವರ್ಷದ ಸಹೋದರಿ ತೀವ್ರ ಗಾಯಗೊಂಡಿರುವ ಘಟನೆ ತಮಿಳುನಾಡಿನ ಗ್ರಾಮವೊಂದರಲ್ಲಿ ನಡೆದಿದೆ.

ಅಪ್ರಾಪ್ತ ಬಾಲಕಿ ಮತ್ತು ಮಹಿಳೆ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂಬ ಆರೋಪಗಳಿದ್ದು, ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.
ವೆಲ್ಲಾಂಪುತ್ತೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ತಲೆಗೆ ತೀವ್ರ ಪೆಟ್ಟು ಬಿದ್ದಿರುವ ತಾಯಿ ಮತ್ತು ಮಗಳನ್ನು ಪುದುಚೇರಿಯ ಆಸ್ಪತ್ರೆಗೆ ಸೇರಿಸಲಾಗಿದೆ.
ಈ ಕೃತ್ಯವನ್ನು ವಿವಿಧ ರಾಜಕೀಯ ಪಕ್ಷಗಳು ಖಂಡಿಸಿದ್ದು, ತಪ್ಪಿತಸ್ಥರ ವಿರುದ್ಧ ಉಗ್ರ ಕ್ರಮಕ್ಕೆ ಆಗ್ರಹಿಸಿವೆ.

ಭೂ ವಿವಾದದ ಹಿನ್ನೆಲೆಯಲ್ಲಿ ಈ ದಾಳಿ, ಕೊಲೆ, ಹತ್ಯೆ ಯತ್ನಗಳು ನಡೆದಿವೆ ಎಂದು ಹೇಳಲಾಗಿದ್ದು, ತನಿಖೆ ನಡೆಯುತ್ತಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ