ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ

Execution Sling Hanging Hangman Knot Penalty Rope

ಮಂಡ್ಯ, ಫೆ.27- ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಗಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ನಾಗಮಂಗಲ ತಾಲೂಕಿನ ಹೊಣಕೆರೆ ಹೋಬಳಿ ಬೂಸಮುದ್ರ ಗ್ರಾಮದ ಶ್ವೇತಾ (29) ಮೃತ ಗೃಹಿಣಿ.
ಮೂಲತಃ ದೇವಲಾಪುರ ಹೋಬಳಿ ಬಿಂಡೇನಹಳ್ಳಿ ಗ್ರಾಮದವರಾದ ಇವರನ್ನು ಬೂಸಮುದ್ರದ ರಘು ಎಂಬುವವರೊಂದಿಗೆ ಐದು ವರ್ಷಗಳ ಹಿಂದೆ ವಿವಾಹ ಮಾಡಿಕೊಡಲಾಗಿತ್ತು. ಇವರಿಗೆ ಎರಡೂವರೆ ವರ್ಷದ ಹೆಣ್ಣು ಮಗುವಿದೆ.
ಗ್ರಾಮದಲ್ಲಿರುವ ಹಾಲಿನ ಡೈರಿಯಲ್ಲಿ ಶ್ವೇತಾ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ ಮನೆಗೆ ಬಂದು ರೂಮಿಗೆ ಹೋಗಿದ್ದಾರೆ. ಎಷ್ಟು ಹೊತ್ತಾದರೂ ಹೊರಗೆ ಬಾರದ್ದನ್ನು ಗಮನಿಸಿದರೆ ಮನೆಯವರು ಬಾಗಿಲು ಒಡೆದು ನೋಡಿದಾಗ ತೊಲೆಗೆ ನೇಣು ಬಿಗಿದುಕೊಂಡಿರುವುದು ಕಂಡುಬಂದಿರುವುದಾಗಿ ಗಂಡನ ಕುಟುಂಬಸ್ಥರು ತಿಳಿಸಿದ್ದಾರೆ.
ಆದರೆ, ಮೃತ ಶ್ವೇತಾಳ ಪೋಷಕರು ಹೇಳುವುದೇ ಬೇರೆ. ಗಂಡನ ಮನೆಯವರೇ ನಮ್ಮ ಮಗಳಿಗೆ ಕಿರುಕುಳ ನೀಡಿ ಆಕೆಯ ಸಾವಿಗೆ ಕಾರಣರಾಗಿದ್ದಾರೆ ಎಂದು ನಾಗಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ