ಛತ್ತೀಸ್ ಗಢದಲ್ಲಿ 12 ನಕ್ಸಲರ ಎನ್ ಕೌಂಟರ್

ಬಿಜಾಪುರ್,ಮಾ.2

ಛತ್ತೀಸ್ ಘಡದಲ್ಲಿ ಕನಿಷ್ಠ 12 ನಕ್ಸಲರನ್ನು ಎನ್ ಕೌಂಟರ್ ಮಾಡಲಾಗಿದೆ. ಭದ್ರತಾ ಸಿಬ್ಬಂದಿ ನಡೆಸಿದ ಎನ್ ಕೌಂಟರ್ ನಲ್ಲಿ ಮಾವೋವಾದಿ ನಾಯಕ ರರಿಭೂಷಣ್ ಕೂಡ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.

ಛತ್ತೀಸ್ ಗಢದಲ್ಲಿ ಕೆಂಪು ಉಗ್ರರ ಹಾವಳಿ ಮುಂದುವರೆದಿರುವಂತೆಯೇ ಭದ್ರತಾ ಸಿಬ್ಬಂದಿ ಈ ಮಹತ್ವದ ಕಾರ್ಯಾಚರಣೆ ನಡೆಸಿದೆ,  ಕಾರ್ಯಾಚರಣೆಯಲ್ಲಿ 12 ನಕ್ಸಲರನ್ನು ಸದೆಬಡಿದಿದ್ದಾರೆ ಎಂದು ತಿಳಿದುಬಂದಿದೆ.

ಛತ್ತೀಸ್ ಘಡದ ಬಿಜಾಪುರ ಜಿಲ್ಲೆಯ ಪೂಜಾರಿ ಕಂಕರ್ ಅರಣ್ಯ ಪ್ರದೇಶದಲ್ಲಿ ನಕ್ಸಲರು ಇರುವ ಕುರಿತು ಖಚಿತ ಮಾಹಿತಿ ಪಡೆದ ಭದ್ರತಾ ಸಿಬ್ಬಂದಿ ರಾತ್ರೋ ರಾತ್ರಿ ಕಾರ್ಯಾಚರಣೆ ನಡೆಸಿದ್ದಾರೆ. ಶುಕ್ರವಾರ ಮುಂಜಾನೆ ನಡೆದ ಗುಂಡಿನ ಚಕಮಕಿಯಲ್ಲಿ ಮಾವೋ ನಾಯಕ ಹರಿಭೂಷಣ್ ಸೇರಿದಂತೆ ಕನಿಷ್ಟ 12 ಮಂದಿ ನಕ್ಸಲರು ಹತರಾಗಿದ್ದಾರೆ.

ಅಂತೆಯೇ ಕಾರ್ಯಾಚರಣೆಯಲ್ಲಿ ಹಲವು ಭದ್ರತಾ ಸಿಬ್ಬಂದಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇನ್ನು ಇತ್ತ ಭದ್ರತಾ ಸಿಬ್ಬಂದಿ ಗುಂಡಿನ ದಾಳಿ ನಡೆಸುತ್ತಿದ್ದಂತೆಯೇ ಪ್ರತಿದಾಳಿ ನಡೆಸಿದ ನಕ್ಸಲರು ಅಲ್ಲಿಂದ ಕಾಲ್ಕಿತ್ತಿದ್ದಾರೆ. ಪರಾರಿಯಾಗಿರುವ ನಕ್ಸಲರಿಗಾಗಿ ಕೂಂಬಿಂಗ್ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ವಿಶೇಷ ಡಿಜಿ ಡಿಎಂ ಅವಸ್ಥಿ ಅವರು ಹೇಳಿದ್ದಾರೆ.

ತೆಲಂಗಾಣ ಮತ್ತು ಛತ್ತೀಸ್ ಗಢದ ನಕ್ಸಲ್ ನಿಗ್ರಹ ಪಡೆಗಳು ಈ ಜಂಟಿ ಕಾರ್ಯಾಚರಣೆ ನಡೆಸಿವೆ ಎಂದು ತಿಳಿದುಬಂದಿ

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ