ಬಿಜೆಪಿ ಮುಖಂಡ ಕೆ.ಸಿ.ವೆಂಕಟೇಶ್ ಜೆಡಿಎಸ್‍ಗೆ ಸೇರ್ಪಡೆ

ಬಿಜೆಪಿ ಮುಖಂಡ ಕೆ.ಸಿ.ವೆಂಕಟೇಶ್ ಜೆಡಿಎಸ್‍ಗೆ ಸೇರ್ಪಡೆ
ಬೆಂಗಳೂರು, ಮಾ.3-ಬಿಬಿಎಂಪಿ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಕೆ.ಸಿ.ವೆಂಕಟೇಶ್ ಇಂದು ಜೆಡಿಎಸ್‍ಗೆ ಸೇರ್ಪಡೆಯಾದರು.
ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಮ್ಮುಖದಲ್ಲಿ ತಮ್ಮ ಬೆಂಬಲಿಗರೊಂದಿಗೆ ಜೆಡಿಎಸ್ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಮಾತನಾಡಿದ ದೇವೇಗೌಡರು, ದಾಸರಹಳ್ಳಿ ಕ್ಷೇತ್ರದ ಅನೇಕ ಮುಖಂಡರು ನಮ್ಮ ಪಕ್ಷಕ್ಕೆ ಸೇರಿದ್ದಾರೆ. ನಾವೆಲ್ಲ ಒಗ್ಗಟ್ಟಾಗಿ ದಾಸರಹಳ್ಳಿ ವಿಧಾನಸಭಾ ಕ್ಷೇತ್ರವನ್ನು ಗೆಲ್ಲುತ್ತೇವೆ. ದಾಸರಹಳ್ಳಿ ಕ್ಷೇತ್ರದಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ಮಾಹಿತಿ ಇದ್ದು, ಅದೆಲ್ಲವನ್ನು ಮಟ್ಟ ಹಾಕುವುದಾಗಿ ತಿಳಿಸಿದರು.
ಬೆಂಗಳೂರಿನ ಅನೇಕರು ಜೆಡಿಎಸ್‍ಗೆ ಸೇರ್ಪಡೆಯಾಗಲಿದ್ದಾರೆ. ಇಂದು ಸುಮಾರು 50ಕ್ಕೂ ಹೆಚ್ಚು ಮುಖಂಡರು ಜೆಡಿಎಸ್ ಸೇರ್ಪಡೆಯಾಗಿರುವುದರಿಂದ ಪಕ್ಷದ ಬಲವೂ ಹೆಚ್ಚಿದಂತಾಗಿದೆ. ಬಿಜೆಪಿ, ಕಾಂಗ್ರೆಸ್ ಪಕ್ಷದಿಂದ ಜೆಡಿಎಸ್ ಸೇರ್ಪಡೆಯಾಗಿರುವುದಕ್ಕೆ ಧನ್ಯವಾದ ಹೇಳುತ್ತೇನೆ. ನಮ್ಮ ಪಕ್ಷಕ್ಕೆ ಬಂದಿರುವ ಎಲ್ಲರನ್ನೂ ಮನೆ ಮಕ್ಕಳಂತೆ ನೋಡಿಕೊಳ್ಳುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ