ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಸುವರ್ಣ ಸಂಭ್ರಮ

ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಸುವರ್ಣ ಸಂಭ್ರಮ
ಬೆಂಗಳೂರು, ಮಾ.4-ದೇಶದಲ್ಲಿಯೇ ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ಇಂದು ಮೊದಲ ಸ್ಥಾನ ಅಲಂಕರಿಸಿರುವುದರಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಕೊಡುಗೆ ಅಪಾರ, ರಾಜ್ಯದಲ್ಲಿ ಇಲ್ಲಿಯವರೆಗೆ 165 ಕೈಗಾರಿಕಾ ಪ್ರದೇಶಗಳನ್ನು ಈ ಮಂಡಳಿ ಅಭಿವೃದ್ಧಿ ಪಡಿಸಿ ಕೈಗಾರಿಕೆಗಳಿಗೆ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹರ್ಷ ವ್ಯಕ್ತಪಡಿಸಿದರು.
ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಗೆ 50 ವರ್ಷ ತುಂಬಿರುವ ಹಿನ್ನಲೆಯಲ್ಲಿ ಇಂದು ಖಾಸಗಿ ಹೊಟೇಲïನಲ್ಲಿ ಹಮ್ಮಿಕೊಂಡಿದ್ದ ಸುವರ್ಣ ಸಂಭ್ರಮ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮತ್ತು ಪ್ರಧಾನ ಕಚೇರಿ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ಉದ್ಯೋಗ ಸೃಷ್ಟಿ ಅತಿ ಮುಖ್ಯವಾದದ್ದು, ಉದ್ಯೋಗ ಮಾತ್ರ ಸಮಾಜದಲ್ಲಿ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮಾನತೆಯನ್ನು ಬೆಳೆಸಲು ಸಾಧ್ಯ ಹಾಗಾಗಿ ಹೆಚ್ಚು ಉದ್ಯೋಗಗಳನ್ನು ಸೃಷ್ಟಿಸುವ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳನ್ನು ಪೆÇ್ರೀ ಸರ್ಕಾರ ಸರ್ವರೀತಿಯ ಸವಲತ್ತುಗಳನ್ನು ನೀಡಲು ಉತ್ಸುಕವಾಗಿದೆ ಎಂದರು.
ಕೈಗಾರಿಕೆಗಳ ಪೆÇ್ರೀ ರಾಜ್ಯ ಹಲವು ನೀತಿಗಳನ್ನು ಜಾರಿಗೆ ತರುವುದರ ಮುಖಾಂತರ ಕೈಗಾರಿಕಾ ಸ್ನೇಹಿ ರಾಜ್ಯವಾಗಿ ಗುರುತಿಸಿಕೊಂಡಿದೆ, ಕೈಗಾರಿಕೆಗಳ ಸ್ಥಾಪನೆಗೆ ಒಳ್ಳೆಯ ವಾತಾವರಣ ಸೃಷ್ಟಿಸಿರುವುದರಿಂದ ಅತಿ ಹೆಚ್ಚು ಬಂಡವಾಳ ರಾಜ್ಯದ ಕಡೆ ಹರಿದು ಬರುತ್ತಿದೆ. ಹೆಚ್ಚುತ್ತಿರುವ ಕೈಗಾರಿಕೆಗಳಿಗನುಗುಣವಾಗಿ ಉತ್ತಮ ಕೌಶಲ್ಯ ಹೊಂದಿದ ಮಾನವ ಸಂಪನ್ಮೂಲದ ಅಗತ್ಯತೆಯನ್ನು ಪೂರೈಸಲು ಹಾಗೂ ಸ್ಥಳೀಯರಿಗೆ ಹೆಚ್ಚಿನ ಉದ್ಯೋಗವಕಾಶಗಳನ್ನು ಹೆಚ್ಚಿಸಲು ಕೌಶಲ್ಯ ಅಭಿವೃದ್ಧಿ ಇಲಾಖೆಯನ್ನು ಹೊಸದಾಗಿ ತೆರೆಯಲಾಗಿದ್ದು ಈ ಮುಖಾಂತರ ಈ ವರ್ಷ 5 ಲಕ್ಷ ಜನರಿಗೆ ಕೌಶಲ್ಯ ಅಭಿವೃದ್ಧಿ ತರಬೇತಿಯನ್ನು ನೀಡುವ ಗುರಿ ಹಾಕಿಕೊಳ್ಳಲಾಗಿದೆ.
ದಲಿತರಿಗೆ, ಮಹಿಳೆಯರಿಗೆ ಹಾಗೂ ಹಿಂದುಳಿದವರಿಗೆ ಕೈಗಾರಿಕಾ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ನೆರವಾಗುವಂತೆ ರಾಜ್ಯದಲ್ಲಿ ಹೊಸ ನೀತಿಗಳನ್ನು ಜಾರಿ ಮಾಡಲಾಗಿದೆ. ಮಹಿಳೆಯರಿಗಾಗಿ ರಾಜ್ಯದಲ್ಲಿ 5 ಮಹಿಳಾ ಕೈಗಾರಿಕಾ ಪಾರ್ಕ್‍ಗಳನ್ನು ಸ್ಥಾಪಿಸಲಾಗಿದೆ.
ಒಟ್ಟಾರೆಯಾಗಿ ನಮ್ಮೆಲ್ಲರ ಜವಬ್ಧಾರಿ ಮತ್ತು ಪ್ರಯತ್ನ ರಾಜ್ಯವನ್ನು ಎಲ್ಲಾ ಕ್ಷೇತ್ರಗಳಲ್ಲಿ ನಂಬರï 1 ಮಾಡುವುದಾಗಿದೆ. ಕಳೆದ 50 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಗೆ ಒಂದು ಸ್ವಂತ ಕಟ್ಟಡವಿರಲಿಲ್ಲ ಹಾಗಾಗಿ ಇಂದು ಸ್ವಂತ ಕಟ್ಟಡದ ಶಂಕುಸ್ಥಾಪನೆ ಮಾಡಲಾಗಿದೆ. ನವ ಕರ್ನಾಟಕ ನಿರ್ಮಾಣ ನಮ್ಮ ಗುರಿ.
ರಾಜ್ಯದಲ್ಲಿ ಅತಿ ಹೆಚ್ಚು ವರ್ಷ ಕೈಗಾರಿಕಾ ಸಚಿವರಾಗಿ ದುಡಿದ ಏಕೈಕ ವ್ಯಕ್ತಿ ದೇಶಪಾಂಡೆ ಅವರು. ಕೈಗಾರಿಕಾ ಇಲಾಖೆಯ ಸಾಧನೆಯಲ್ಲಿ ಸಚಿವರ ಕೊಡುಗೆ ಅಪಾರ. ಈ ಸಂಸ್ಥೆ ಇನ್ನೂ ಎತ್ತರಕ್ಕೆ ಬೆಳೆಯಲಿ ಎಂದು ಹಾರೈಸಿ ಇಲಾಖೆಯ ಸರ್ವರಿಗೂ ಸುವರ್ಣ ಸಂಭ್ರಮದ ಶುಭಾಶಯ ಕೋರಿದರು.
ಗೌರವಾನ್ವಿತ ಅತಿಥಿಗಳಾಗಿ ಆಗಮಿಸಿದ್ದ ಇನ್‍ಫೆÇೀಸಿಸ್‍ನ ಸಂಸ್ಥಾಪಕ ಎನ್.ಆರ್.ನಾರಾಯಣ ಮೂರ್ತಿ ಅವರು ಮಾತನಾಡಿ ತಾವು ಕಳೆದ 2-3 ದಶಕಗಳ ಹಿಂದೆ ಸಂಸ್ಥೆ ಪ್ರಾರಂಭಿಸುವುದಕ್ಕೆ ಹಣ ಮತ್ತು ಜಾಗ ನೀಡಿದ್ದ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಸಹಾಯವನ್ನು ಸ್ಮರಿಸಿದರು.
ಅಂದು ಚಿಕ್ಕದಾಗಿ ಸಾಲದಲ್ಲಿ ಪ್ರಾರಂಭವಾದ ಇನ್‍ಫೆÇೀಸಿಸ್ ಇಂದು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವುದರಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಕೊಡುಗೆ ಅಪಾರ, ಇಂದು ಇನ್‍ಫೆÇೀಸಿಸ್ ಸಂಸ್ಥೆ ರಾಜ್ಯದ ಬೆಂಗಳೂರು, ಮೈಸೂರು, ಮಂಗಳೂರು ಮತ್ತು ಹುಬ್ಬಳ್ಳಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಒಟ್ಟು 800 ಎಕರೆ ಜಾಗವನ್ನು ಸರ್ಕಾರದಿಂದ ಪಡೆದಿದೆ.
ಇಂದು ದೇಶದಲ್ಲಿಯೇ ಅತಿಹೆಚ್ಚು ಸಾಫ್ಟ್‍ವೇರ್ ರಫ್ತು ಮಾಡುವ ಸಂಸ್ಥೆ ಎಂಬ ಮನ್ನಣೆ ಪಡೆದಿರುವ ಇನ್‍ಫೆÇೀಸಿಸ್ ಕರ್ನಾಟಕ ನೆಲದ ಸಂಸ್ಥೆಯಾಗಿದೆ. ಸಂಸ್ಥೆ ರಾಜ್ಯದಲ್ಲಿ ಒಟ್ಟು 10 ಸಾವಿರ ಕೋಟಿ ರೂ. ಬಂಡವಾಳ ಹೂಡಿದ್ದು, ಕಳೆದ ಸಾಲಿನಲ್ಲಿ ಒಟ್ಟು 20 ಸಾವಿರ ಕೋಟಿ ರಫ್ತು ವ್ಯವಹಾರ ನಡೆಸಿದೆ.
ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ತನ್ನ ಕಾರ್ಯಗಳಿಗೆ ಮತ್ತುಷ್ಟು ವೇಗ ಮತ್ತು ಪಾರದರ್ಶಕತೆಯನ್ನು ನೀಡುವ ಮೂಲಕ ದೇಶದಲ್ಲಿ ಮಾತ್ರವಲ್ಲ ಜಾಗತಿಕವಾಗಿ ನಂಬರ್ 1 ಸ್ಥಾನ ಪಡೆಯಲಿ ಎಂದು ಹಾರೈಸಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಕಳೆದ 50 ವರ್ಷಗಳ ಬೆಳೆದು ಬಂದ ಹಾದಿ ಹಾಗೂ ಸಾಧನೆ ಕರಿತು ತಯಾರಿಸಿರುವ 30 ನಿಮಿಷಗಳ ಕಾಲದ ಕಿರುಚಿತ್ರವನ್ನು ಸಹ ಬಿಡುಗಡೆ ಮಾಡಲಾಯಿತು. ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಬೆಳವಣಿಗೆಯಲ್ಲಿ ಕೊಡುಗೆ ನೀಡಿದ ಮಂಡಳಿಯ ನಿವೃತ್ತ ಮತ್ತು ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಸನ್ಮಾನಿಸಲಾಯಿತು.
ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಿ.ವಿ.ಪ್ರಸಾದ್, ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಜಯರಾಮï, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಆಯುಕ್ತ ದರ್ಪಣ್ ಜೈನ್ ಸೇರಿದಂತೆ ಕೆಸ್‍ಪಿಸಿಬಿ, ಕೆಎಸ್‍ಎಸ್‍ಐಡಿಸಿ, ಕೆಎಸ್‍ಎಫ್‍ಸಿಯ ಮುಖ್ಯಸ್ಥರು, ಸದಸ್ಯರು ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ