ಶಿವಮೊಗ್ಗದ ಅಂಬೇಡ್ಕರ್ ಭವನದಲ್ಲಿ ಮಹಿಳಾ ಸಮಾವೇಶ

ಶಿವಮೊಗ್ಗದ ಅಂಬೇಡ್ಕರ್ ಭವನದಲ್ಲಿ ಮಹಿಳಾ ಸಮಾವೇಶ
ಬೆಂಗಳೂರು,ಮಾ.5- ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ಒಕ್ಕೂಟದ ವತಿಯಿಂದ ಇದೇ 8 ಮತ್ತು 9ರಂದು ಶಿವಮೊಗ್ಗದ ಅಂಬೇಡ್ಕರ್ ಭವನದಲ್ಲಿ ಮಹಿಳಾ ಸಮಾವೇಶವನ್ನು ಹಮ್ಮಿಕೊಂಡಿದ್ದೇವೆ ಎಂದು ಮಹಿಳಾ ಮುನ್ನಡೆಯ ಮುಖಂಡರಾದ ಮಲ್ಲಿಗೆ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಣ್ಣುಮಕ್ಕಳಲಿರುವ ಭಯವನ್ನು ದೂರ ಮಾಡಿ ಆತ್ಮವಿಶ್ವಾಸ ಮೂಡಿಸಿ ಅವರ ಜಾಗೃತಿ ಮೂಡಿಸಲು ಈ ಸಮಾವೇಶವನ್ನು ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.
ನಮ್ಮ ಸುತ್ತಮುತ್ತಲಿನಲ್ಲಿರುವ ಹೆಚ್ಚತ್ತಿರುವ ದೌರ್ಜನ್ಯಗಳು ಹೆಚ್ಚುತ್ತಿದ್ದು, ದೆಹಲಿಯ ನಿರ್ಭಯ ಘಟನೆ ಮಂಗಳೂರಿನಲ್ಲಿ ಹಾಡುಹಗಲೇ ನಡೆದ ದಬ್ಬಾಳಿಕೆಗಳು ಇವೆಲ್ಲ ಸೂಕ್ಷ್ಮ ಮನಸ್ಸಿನ ಮಹಿಳೆಯರ ಮೇಲೆ ಪ್ರಭಾವ ಉಂಟುಮಾಡಿದೆ. ಇನ್ನು ಮುಂದೆ ಈ ತರ ನೋವುಗಳನ್ನು ಸಹಿಸಿಕೊಂಡು ಇರಬಾರದು. ಹೆಣ್ಣು ಮಕ್ಕಳು ಇದನ್ನು ಎದುರಿಸಬೇಕು ಎಂದು ಸಲಹೆ ಮಾಡಿದರು.
ಈ ಹಿನ್ನೆಲೆಯಲ್ಲಿ ಇದೇ 8ರಂದು ಸಂವಿಧಾನ, ಸಮಾಜ ಮತ್ತು ಮಹಿಳೆ ಎಂಬ ವಿಷಯದ ಬಗ್ಗೆ ವಿಚಾರ ಸಂಕಿರಣ ನಡೆಯಲಿದ್ದು, ಪುಣೆಯ ಮನೀಷಿ ಗುಪ್ತೆ ಈ ಬಗ್ಗೆ ಉಪನ್ಯಾಸ ನೀಡಲಿದ್ದಾರೆ.
ಸಂಜೆ 5 ಗಂಟೆಗೆ ಸಮಾವೇಶಕ್ಕೆ ಆಗಮಿಸುವ ಎಲ್ಲ ಹೆಣ್ಣು ಮಕ್ಕಳು ಬಿಳಿ ಸಮವಸ್ತ್ರ ಧರಿಸಿ ಮೌನಜಾಗೃತಿ ಹಮ್ಮಿಕೊಂಡಿರುವುದಾಗಿ ತಿಳಿಸಿದರು.
9ರಂದು ಶಿವಮೊಗ್ಗ ನೆಹರು ಮೈದಾನದಿಂದ ಬೃಹತ್ ಹಕ್ಕೋತ್ತಾಯ ಜಾಥಾ ನಡೆಯಲಿದೆ ಎಂದು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ