ಯಾದವ ಸಮಾಜದವರಿಗೆ ರಾಜ್ಯಸಭಾ ಸ್ಥಾನಕ್ಕೆ ನಾಮನಿರ್ದೇಶನ ಮಾಡುವಂತೆ ಮನವಿ

ಬೆಂಗಳೂರು, ಮಾ.10- ವಿವಿಧಕ್ಷೇತ್ರಗಳಲ್ಲಿ ಹಿಂದುಳಿದಿರುವ ಯಾದವ ಸಮಾಜದವರಿಗೆ ರಾಜ್ಯಸಭಾ ಸ್ಥಾನಕ್ಕೆ ನಾಮನಿರ್ದೇಶನ ಮಾಡುವಂತೆ ಯಾದವ ಮಹಾಸಭಾದ ಅಧ್ಯಕ್ಷ ಬಾಡದ ಆನಂದರಾಜ್ ಮನವಿ ಮಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾದವ ಸಮಾಜ ಸಾಮಾಜಿಕ, ಆರ್ಥಿಕ, ರಾಜಕೀಯವಾಗಿ ಹಿಂದುಳಿದಿದ್ದು, ರಾಜಕೀಯವಾಗಿ ಸಮಾಜವನ್ನು ಮುಖ್ಯವಾಹಿನಿಗೆ ತರಲು ರಾಜ್ಯಸಭಾ ಸ್ಥಾನಕ್ಕೆ ನಾಮನಿರ್ದೇಶನ ಮಾಡಬೇಕು ಎಂದರು.
ಯಾದವರೇ ಹೆಚ್ಚಾಗಿರುವ 14 ಕ್ಷೇತ್ರಗಳಾದ ಚಿತ್ರದುರ್ಗ, ಮೈಸೂರು, ಚಿಕ್ಕನಾಯಕನಹಳ್ಳಿ, ಯಲಹಂಕ, ರಾಯಚೂರು, ಕನಕಪುರ, ಶಿರಾ, ಗುಬ್ಬಿ, ಶಾಂತಿನಗರ, ಶಿಡ್ಲಘಟ್ಟ ಮತ್ತಿತರ ಕಡೆ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಟಿಕೆಟ್ ನೀಡಿ ಸ್ಪರ್ಧೆಗೆ ಅವಕಾಶ ಕಲ್ಪಿಸುವಂತೆ ಕೋರಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ