ಸಾಲ ವಸೂಲಾತಿಗಾಗಿ 45 ವರ್ಷದ ದಲಿತ ಮಹಿಳೆಯೊಬ್ಬರನ್ನು ಜೀವಂತ ದಹನ ಮಾಡಲು ಯತ್ನ

Fire Fierce Hot Flames Burning Orange Heat

ಬಲ್ಲಿಯಾ, ಮಾ.10- ಸಾಲ ವಸೂಲಾತಿಗಾಗಿ 45 ವರ್ಷದ ದಲಿತ ಮಹಿಳೆಯೊಬ್ಬರನ್ನು ಜೀವಂತ ದಹನ ಮಾಡಲು ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ ಜಜೌಲಿ ಗ್ರಾಮದಲ್ಲಿ ನಡೆದಿದೆ. ಸುಟ್ಟಗಾಯಗಳಿಂದ ತೀವ್ರ ಗಾಯಗೊಂಡಿರುವ ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಕೃತ್ಯದ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ.
20,000 ರೂ.ಗಳ ಸಾಲ ವಸೂಲಾತಿಗಾಗಿ ಕೊಲೆ ಯತ್ನ ನಡೆದಿದೆ. ರೇಷ್ಮಾ ದೇವಿ ಎಂಬ ಮಹಿಳೆ ತನ್ನ ಮನೆಯಲ್ಲಿ ಮಲಗಿದ್ದಾಗ ನಿನ್ನೆ ದುಷ್ಕರ್ಮಿಗಳು ಆಕೆಯ ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಪರಾರಿಯಾದರು. ತಕ್ಷಣ ಗ್ರಾಮಸ್ಥರು ಆಕೆಯನ್ನು ಆಸ್ಪತ್ರೆಗೆ ಸೇರಿಸಿದರು. ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೆÇಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ಸಿಂಗ್ ಹೇಳಿದ್ದಾರೆ.
ಈ ಘಟನೆ ಸಂಬಂಧ ಸೋನು ಮತ್ತು ಸಿದ್ಧು ಸಿಂಗ್ ಎಂಬುವನ್ನು ಬಂಧಿಸಲಾಗಿದೆ.
ಮಹಿಳೆ ಆರೋಪಿಗಳಿಂದ ಸಾಲ ಪಡೆದಿದ್ದರು. 20,000 ರೂ.ಗಳನ್ನು ಮರು ಪಾವತಿಸಿದ ನಂತರವು ಬಡ್ಡಿ ಹಣಕ್ಕಾಗಿ ಪೀಡಿಸುತ್ತಿದ್ದ ಆರೋಪಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಪೆÇಲೀಸರು ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ