ಸೇತುಸಮುದ್ರಂ ಯೋಜನೆಗಾಗಿ ರಾಮಸೇತುವನ್ನು ಧ್ವಂಸಗೊಳಿಸುವುದಿಲ್ಲ; ಸುಪ್ರೀಂ ಗೆ ಕೇಂದ್ರ ಸ್ಪಷ್ಟನೆ

ನವದೆಹಲಿ:ಮಾ-16: ಸೇತುಸಮುದ್ರಂ ನೌಕಾ ಕಾಲುವೆ ಯೋಜನೆಗಾಗಿ ಪೌರಾಣಿಕ ಹಿನ್ನಲೆಯುಳ್ಳ ರಾಮಸೇತುವನ್ನು ಧ್ವಂಸಗೊಳಿಸುವುದಿಲ್ಲ ಎಂದು ಕೇಂದ್ರ ಸರಕಾರ ಸುಪ್ರೀಂ ಕೋರ್ಟಿಗೆ ತಿಳಿಸಿದೆ.

ಕೇಂದ್ರ ನೌಕಾ ಸಾರಿಗೆ ಸಚಿವಾಲಯ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್‌ ದೀಪಕ್‌ ಮಿಶ್ರಾ ಅವರ ನೇತೃತ್ವದ ಪೀಠದ ಮುಂದೆ ಸಲ್ಲಿಸಿದ ಅಫಿದವಿತ್‌ನಲ್ಲಿ ಈ ವಿಷಯ ಸ್ಪಷ್ಟಪಡಿಸಿದೆ.

ಬಿಜೆಪಿ ನಾಯಕ ಸುಬ್ರಮಣ್ಯನ್ ಸ್ವಾಮಿ ರಾಮಸೇತುವನ್ನು ಧ್ವಂಸಗೊಳಿಸದಂತೆ ಕೇಂದ್ರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಕೋರ್ಟಿಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಪಿಐಎಲ್‌ ವಿಚಾರಣೆ ವೇಳೆ ಈ ಅಫಿದವಿತ್ ಸಲ್ಲಿಸಲಾಗಿದೆ.

ದೇಶದ ಹಿತಾಸಕ್ತಿಗಾಗಿ ರಾಮಸೇತುವನ್ನು ಧ್ವಂಸಗೊಳಿಸದೆ, ಸೇತುಸಮುದ್ರಂ ಯೋಜನೆಗೆ ಪರ್ಯಾಯ ಮಾರ್ಗ ಹುಡುಕಲು ಭಾರತ ಸರಕಾರ ಉದ್ದೇಶಿಸಿದೆ ಎಂದು ಅಫಿದವಿತ್‌ನಲ್ಲಿ ತಿಳಿಸಲಾಗಿದೆ. ಕೇಂದ್ರದ ಪರವಾಗಿ ಕೋರ್ಟಿಗೆ ಹಾಜರಾದ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಪಿಂಕಿ ಆನಂದ್ ಈ ನಿಲುವನ್ನು ಸ್ಪಷ್ಟಪಡಿಸಿದರು.

Centre tells SC,not damage Ram Sethu,shipping channel project

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ