ನಗರದ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ವ್ಯಕ್ತಿಗಳು ರೈಲಿಗೆ ಸಿಕ್ಕಿ ಮೃತಪಟ್ಟಿದ್ದಾರೆ:

ಬೆಂಗಳೂರು, ಮಾ.17- ನಗರದ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ವ್ಯಕ್ತಿಗಳು ರೈಲಿಗೆ ಸಿಕ್ಕಿ ಸಾವನ್ನಪ್ಪಿದ್ದು, ಇವರ ಹೆಸರು-ವಿಳಾಸ ತಿಳಿದುಬಂದಿಲ್ಲ. ವಾರಸುದಾರರು ಈ ಕೂಡಲೇ ಸಂಬಂಧಿಸಿದ ರೈಲ್ವೆ ಪೆÇಲೀಸರನ್ನು ಸಂಪರ್ಕಿಸಲು ಮನವಿ ಮಾಡಲಾಗಿದೆ.
ಸಿಟಿ ರೈಲ್ವೆ: ಕೆಂಗೇರಿ-ಹೆಬ್ಬಾಳ ರೈಲ್ವೆ ನಿಲ್ದಾಣಗಳ ಮಧ್ಯೆ ವ್ಯಕ್ತಿಯೊಬ್ಬರು ಇಂದು ಬೆಳಗ್ಗೆ ರೈಲಿಗೆ ಸಿಕ್ಕಿ ಮೃತಪಟ್ಟಿದ್ದಾರೆ.
ಕಂಟೋನ್ಮೆಂಟ್ ರೈಲ್ವೆ: ಬೈಯಪ್ಪನಹಳ್ಳಿಯ ಪ್ಯಾನಲ್ ಬಳಿ ಸುಮಾರು 60 ವರ್ಷದ ವ್ಯಕ್ತಿ ರೈಲಿಗೆ ಸಿಕ್ಕಿ ಮೃತಪಟ್ಟಿದ್ದಾರೆ.
ಇದೇ ವ್ಯಾಪ್ತಿಯ ಮತ್ತೊಂದು ಕಡೆ ವೈಟ್‍ಫೀಲ್ಡ್ ರೈಲ್ವೆ ನಿಲ್ದಾಣದ ಸಮೀಪ ಸುಮಾರು 40 ವರ್ಷದ ಗಂಡಸು ರೈಲಿಗೆ ಸಿಕ್ಕಿ ಮೃತಪಟ್ಟಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ