ಕ್ಷುಲ್ಲಕ ವಿಚಾರಕ್ಕೆ ವಿದ್ಯಾರ್ಥಿಗಳು ಗಲಾಟೆ

ಚಿಕ್ಕಮಗಳೂರು,ಮಾ.20- ಕ್ಷುಲ್ಲಕ ವಿಚಾರಕ್ಕೆ ವಿದ್ಯಾರ್ಥಿಗಳು ಗಲಾಟೆ ಮಾಡಿಕೊಂಡು ಹೊಡೆದಾಡಿರುವ ಘಟನೆ ಜಿಲ್ಲೆಯ ಕೊಪ್ಪದ ಪದವಿ ಕಾಲೇಜಿನಲ್ಲಿ ನಡೆದಿದೆ.
ಪದವಿ ಕಾಲೇಜಿನಲ್ಲಿ ಸಾಂಸ್ಕøತಿಕ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ವಿದ್ಯಾರ್ಥಿಗಳು ವೇದಿಕೆಯಲ್ಲಿ ನೃತ್ಯ ಮಾಡುವಾಗ ಒಬ್ಬರಿಗೊಬ್ಬರಿಗೆ ಮೈಕೈ ತಾಗಿದೆ. ಇಷ್ಟಕ್ಕೆ ಮಾತಿಗೆ ಮಾತು ಬೆಳೆದು ಗಲಾಟೆ ಶುರುವಾಗಿ ವಿದ್ಯಾರ್ಥಿಗಳು ಹೊಡೆದಾಡಿಕೊಂಡಿದ್ದಾರೆ.
ಇದನ್ನು ಕಂಡು ಉಪನ್ಯಾಸಕರು ಜಗಳ ಬಿಡಿಸಲು ಮುಂದಾದಾಗ ಅವರಿಗೂ ಏಟುಗಳು ಬಿದ್ದಿವೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ