ಜಮ್ಮು ಮತ್ತು ಕಾಶ್ಮೀರದಲ್ಲಿ ಗುಂಡಿನ ಕಾಳಗದಲ್ಲಿ ಈವರೆಗೆ ಐವರು ಭಯೋತ್ಪಾದಕರು ಹತ:

ಶ್ರೀನಗರ, ಮಾ.21-ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ನಿಗ್ರಹ ಕಾರ್ಯಾಚರಣೆಯನ್ನು ಭದ್ರತಾ ಪಡೆಗಳು ತೀವ್ರಗೊಳಿಸಿದ್ಧಾರೆ. ಕುಪ್ವಾರ ಜಿಲ್ಲೆಯಲ್ಲಿ ನಿನ್ನೆಯಿಂದ ಮುಂದುವರಿದ ಗುಂಡಿನ ಕಾಳಗದಲ್ಲಿ ಈವರೆಗೆ ಐವರು ಭಯೋತ್ಪಾದಕರು ಹತರಾಗಿದ್ದಾರೆ. ಎನ್‍ಕೌಂಟರ್‍ನಲ್ಲಿ ಕೆಲವು ಯೋಧರೂ ಗಾಯಗೊಂಡಿದ್ಧಾರೆ.
ಕುಪ್ವಾರದ ಅರಂಪೆÇೀರಾ ಪ್ರದೇಶದಲ್ಲಿ ನಿನ್ನೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರರು ಹತರಾದರು. ಇಂದು ಮತ್ತೆ ಮುಂದುವರಿದ ಎನ್‍ಕೌಂಟರ್‍ನಲ್ಲಿ ಮತ್ತೊಬ್ಬ ಉಗ್ರಗಾಮಿಯನ್ನು ಯೋಧರು ಹೊಡೆದುರುಳಿಸಿದ್ದಾರೆ.
ಹತರಾದ ಉಗ್ರರಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರದೇಶದಲ್ಲಿ ಅಡಗಿರಬಹುದಾದ ಉಗ್ರರಿಗಾಗಿ ಶೋಧ ಮುಂದುವರಿದಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ