ಶೃಂಗೇರಿಗೆ ಭೇಟಿ ನೀಡಿ ಶಾರದಾಂಬೆಯ ದರ್ಶನ ಪಡೆದ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ

ಚಿಕ್ಕಮಗಳೂರು, ಮಾ.21- ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರು ಇಂದು ಬೆಳಗ್ಗೆ ಶೃಂಗೇರಿಗೆ ಭೇಟಿ ನೀಡಿ ಶಾರದಾಂಬೆಯ ದರ್ಶನ ಪಡೆದರು.
ಶೃಂಗೇರಿ ಜಗದ್ಗುರು ಶ್ರೀ ಭಾರತೀತೀರ್ಥ ಸ್ವಾಮೀಜಿ ಅವರ ಆಶೀರ್ವಾದ ಪಡೆದ ನಂತರ ರಾಹುಲ್‍ಗಾಂಧಿ ಅವರು ಸಂಸ್ಕøತ ಪಾಠಶಾಲೆಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಈ ವೇಳೆ ಅಭಿಪ್ರಾಯ ವ್ಯಕ್ತಪಡಿಸಿದ ಅವರು, ತಮ್ಮ ತಂದೆ ರಾಜೀವ್‍ಗಾಂಧಿ ಹಾಗೂ ಅಜ್ಜಿ ಇಂದಿರಾಗಾಂಧಿ ಅವರು ಶಾರದಾ ಮಠದ ಭಕ್ತರಾಗಿದ್ದು, ಅವರು ಆಗಮಿಸಿದ್ದ ಈ ಪುಣ್ಯಕ್ಷೇತ್ರಕ್ಕೆ ನಾನು ಬಂದಿದ್ದು ಸಂತಸ ತಂದಿದೆ ಎಂದರು.

ಅಜ್ಜಿ ಇಂದಿರಾಗಾಂಧಿ ಅವರಿಗೆ ರಾಜಕೀಯ ಪುನರ್‍ಜನ್ಮ ನೀಡಿದ ಜಿಲ್ಲೆ ಚಿಕ್ಕಮಗಳೂರು ಆಗಿದೆ. ಶಂಕರಾಚಾರ್ಯರು ಸ್ಥಾಪಿಸಿದ ಪುಣ್ಯಕ್ಷೇತ್ರ ಶೃಂಗೇರಿಗೆ ತಾವು ಆಗಮಿಸಿ ತಾಯಿ ಶಾರದಾಂಬೆಯ ದರ್ಶನ ಪಡೆದಿರುವುದು ನೆಮ್ಮದಿ ತಂದಿದೆ ಎಂದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಜಿಲ್ಲಾ ಉಸ್ತುವಾರಿ ಸಚಿವ ರೋಷನ್‍ಬೇಗ್, ಸಚಿವ ಡಿ.ಕೆ.ಶಿವಕುಮಾರ್, ಮುಖಂಡರಾದ ರಾಜೇಗೌಡ, ಡಾ.ಕೆ.ಪಿ.ಅಂಶುಮಂತ್ ಮತ್ತಿತರ ಮುಖಂಡರಿದ್ದರು.
ನಕ್ಸಲ್ ಪ್ರದೇಶವಾದ ಕಾರಣ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ