ದರೋಡೆಕೋರರು ಬೈಕ್‍ಗೆ ಡಿಕ್ಕಿ ಹೊಡೆಸಿ ಜಗಳವಾಡಿ ಚಾಕುವಿನಿಂದ ಇರಿದು ಐದುಸಾವಿರ ಕಸಿದು ಪರಾರಿ:

ಬೆಂಗಳೂರು, ಮಾ.21- ಬೈಕ್‍ನಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ಹಿಂಬಾಲಿಸಿ ಬಂದ ದರೋಡೆಕೋರರು ಬೈಕ್‍ಗೆ ಡಿಕ್ಕಿ ಹೊಡೆಸಿ ಜಗಳವಾಡಿ ಚಾಕುವಿನಿಂದ ಇರಿದು ಐದುಸಾವಿರ ಕಸಿದು ಪರಾರಿಯಾಗಿರುವ ಘಟನೆ ವಿಜಯನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ರಾಜಾಜಿನಗರದ ನಿವಾಸಿ ಸುರೇಶ್‍ಪೂಜಾರಿ ಎಂಬುವರು ನಿನ್ನೆ ಸಂಜೆ 4 ಗಂಟೆಯಲ್ಲಿ ನಾಗರಬಾವಿ ಮುಖ್ಯರಸ್ತೆಯ ಸರ್ವೋದಯ ಶಾಲೆ ಬಳಿ ಬೈಕ್‍ನಲ್ಲಿ ಹೋಗುತ್ತಿದ್ದರು.
ಈ ವೇಳೆ ಮತ್ತೊಂದು ಬೈಕ್‍ನಲ್ಲಿ ಹಿಂಬಾಲಿಸಿಬಂದ ದರೋಡೆಕೋರರು ಸುರೇಶ್ ಅವರ ಬೈಕ್‍ಗೆ ಡಿಕ್ಕಿ ಹೊಡೆಸಿ ಅವರೊಂದಿಗೆ ಜಗಳವಾಡಿ ಚಾಕುವಿನಿಂದ ಇರಿದು ಐದು ಸಾವಿರ ಕಸಿದುಕೊಂಡು ಪರಾರಿಯಾಗಿದ್ದಾರೆ.
ಸುರೇಶ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಂತರ ವಿಜಯನಗರ ಠಾಣೆಗೆ ದೂರು ನೀಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ