ಶಾಸಕರ ಮನೆ ಎದುರು ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ…

ಬಾದಾಮಿ ಶಾಸಕ ಬಿ.ಬಿ.ಚಿಮ್ಮನಕಟ್ಟಿ ಅವರ ಮನೆ ಎದುರು ಆತ್ಮಹತ್ಯೆ ಮಾಡಿಕೊಂಡ ಮಹಿಳೆ…

ಬಾಗಲಕೋಟೆ ಜಿಲ್ಲೆ ಬಾದಾಮಿ ವಿಧಾನಸಭಾ ಕ್ಷೇತ್ರ…

ಬಾದಾಮಿ ತಾಲೂಕಿನ ಯರಗೊಪ್ಪ ಎಸ್ ಸಿ ಗ್ರಾಮದ ಶಾಂತವ್ವ ವಾಲಿಕಾರ ಉರ್ಪ ತಳವಾರ(55) ಮಹಿಳೆ ಆತ್ಮಹತ್ಯೆ…

ಯರಗೊಪ್ಪ ಗ್ರಾಮದ ಗ್ರಾಮ ಸಹಾಯಕ ಕೆಲಸಕ್ಕೆ ಶಾಂತವ್ವ ಪುತ್ರ ಶಂಕ್ರಪ್ಪ ಅವರನ್ನ ನೇಮಕ ಮಾಡುವಂತೆ ಮನವಿ ಮಾಡಿದ್ದರು…

ಈ ಮೊದಲು ಶಂಕ್ರವ್ವ ಅವರ ಪತಿ ಗ್ರಾಮ ಸಹಾಯಕ ಇದ್ದರು.. ಅವರ ಸತ್ತ ಮೇಲೆ ಮಗ ಆ ಕೆಲಸ ಮುಂದುವರೆಸಿದ್ದ.. ಹೀಗಾಗಿ ಆತನನ್ನೆ ನೇಮಕ
ಮಾಡುವಂತೆ ಕೋರಿದ್ದರು…

ಆದರೆ, ಶಾಸಕ ಚಿಮ್ಮನಕಟ್ಟಿ ಅವರು ತಮ್ಮ ಸ್ವಜಾತಿಯ ಗೋವಿಂದಪ್ಪ ಅವರನ್ನ ನೇಮಕ ಮಾಡಿಸಿದ್ದರು ಎನ್ನುವ ಆರೋಪ..

ಈ ವಿಷಯ ತಿಳಿದು ಮನನೊಂದ ಮಹಿಳೆ ಶಾಸಕರ ಮನೆ ಎದುರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ..

ಇದೀಗ ಶಾಸಕರ ವಿರುದ್ದ ಗ್ರಾಮಸ್ಥರು ಆಸ್ಪತ್ರೆ ಎದುರು ರಸ್ತೆಯಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ…

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ