ರೈತ ಅತ್ಮಾ ಹತ್ತೆ

ಹುಣಸೂರು, ಮಾ.25-ಸಾಲದ ಶೂಲಕ್ಕೆ ಸಿಲುಕಿದ ರೈತನೋರ್ವ ಆತ್ಮಹತ್ಯೆಯ ಹಾದಿಹಿಡಿದಿರುವ ಘಟನೆ ತಾಲ್ಲೂಕಿನ ಬಿ.ಆರ್.ಕಾವಲ್ ಗ್ರಾಮದಲ್ಲಿ ನಡೆದಿದೆ.
ಬಿ.ಆರ್.ಕಾವಲ್ ಗ್ರಾಮದ ಪಾಪೇಗೌಡ (65) ಆತ್ಮಹತ್ಯೆಗೆ ಶರಣಾದ ರೈತ.
ಈತನು ಪಿರಿಯಾಪಟ್ಣಣ ಕಾವೇರಿ ಗ್ರಾಮೀಣ ಬ್ಯಾಂಕಿನಲ್ಲಿ 10.30ಲಕ್ಷ ಕೃಷಿ ಸಾಲ, ಹನಗೋಡು ಸಹಕಾರ ಬ್ಯಾಂಕಿನಲ್ಲಿ 50ಸಾವಿರ ಹಾಗೂ ಸೊಸೆ ಸುಮಿತ್ರರ ಹೆಸರಿನಲ್ಲಿ ಸಂಘದಲ್ಲಿ 1ಲಕ್ಷ ರೂ ಸಾಲ ಮಾಡಿ ಅದನ್ನು ತೀರಿಸಲಾಗದೆ ಬಡ್ಡಿ ಹೆಚ್ಚಾದ ಕಾರಣ ಮನನೊಂದ ನಿನ್ನೆ ಸಂಜೆ ತಮ್ಮ ಮನೆಯಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ
ಈ ಸಂಬಂಧ ಹುಣಸೂರು ಗ್ರಾಮಾಂತರ ಪೆÇೀಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಡ್ಯ, ಮಾ.25-ರಸ್ತೆ ದಾಟುತ್ತಿದ್ದ ವೃದ್ಧೆಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಆಕೆ ಸ್ಥಳದಲ್ಲೇ ಮೃತಪಟ್ಟ ಘಟನೆ ಕೆಆರ್‍ಎಸ್ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೈಸೂರು ತಾಲೂಕು ಕೂರ್ಗಳ್ಳಿ ನಿವಾಸಿ ರಾಮಲಿಂಗೇಗೌಡ ಪತ್ನಿ ಸಿಂಗಾರಮ್ಮ (70) ಮೃತಪಟ್ಟ ವೃದ್ಧೆ.

ಈಕೆ ಶ್ರೀರಂಗಪಟ್ಟಣ ತಾಲೂಕು ಹುಲಿಕೆರೆಯಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದರು. ನಿನ್ನೆ ಸಂಜೆ ಹುಲಿಕೆರೆ ಬಳಿ ರಸ್ತೆ ದಾಟುತ್ತಿದ್ದಾಗ ಯಾವುದೋ ವಾಹನ ಡಿಕ್ಕಿ ಹೊಡೆದಿದೆ.
ಕೆಆರ್‍ಎಸ್ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ