ಶಿಕಾರಿಪುರದಲ್ಲಿ ನವಶಕ್ತಿ ಸಮಾವೇಶ

ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪನವರು ಇಂದು ತಮ್ಮ ಸ್ವಕ್ಷೇತ್ರ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ನವಶಕ್ತಿ ಸಮಾವೇಶ ನಡೆಸಿದರು. ಕೇಂದ್ರ ಸಚಿವರಾದ ಮನೋಜ್ ಸಿನ್ಹಾರವರು ಸಮಾವೇಶದಲ್ಲಿ ಉಪಸ್ಥಿತರಿದ್ದರು. ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸಲು ಈ ಸಮಾವೇಶ ನಡೆಸಲಾಗುತ್ತಿದ್ದು, ಕ್ಷೇತ್ರದ ಎಲ್ಲಾ ಪಧಾಧಿಕಾರಿಗಳು ಈ ಸಮಾವೇಶದಲ್ಲಿ ಭಾಗವಹಿಸಿದ್ದರು. ಮುಂದಿನ ಚುನಾವಣೆಯ ಕಾರ್ಯತಂತ್ರಗಳ ಕುರಿತು ಮಾರ್ಗದರ್ಶನ ಮಾಡಿದ ಮಾನ್ಯ ಯಡಿಯೂರಪ್ಪನವರು ಎಲ್ಲರೂ ಸಂಘಟಿತರಾಗಿ ಪಕ್ಷದ ಧ್ಯೇಯೋದ್ದೇಶಗಳನ್ನು ಸಾಕಾರಗೊಳಿಸುವಲ್ಲಿ ಶ್ರಮಿಸಬೇಕೆಂದು ಕರೆ ನೀಡಿದರು. ಮುಖಂಡರುಗಳಾದ ಶ್ರೀ ಬಿ.ವೈ.ರಾಘವೇಂದ್ರ, ಶ್ರೀ ರುದ್ರೇಗೌಡ ಮತ್ತು ಜಿಲ್ಲೆಯ ಅನೇಕರು ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ