ಪಕ್ಷದ ಮುಖಂಡರೊಂದಿಗೆ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಸಭೆ:

ಮೈಸೂರು, ಮಾ.25- ಎರಡು ದಿನಗಳ ಪ್ರವಾಸಕ್ಕೆ ಜಿಲ್ಲೆಗೆ ಆಗಮಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರು ಸರ್ಕಾರಿ ಅತಿಥಿ ಗೃಹದಲ್ಲಿ ಪಕ್ಷದ ಮುಖಂಡರೊಂದಿಗೆ ಸಭೆ ನಡೆಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಮುಖಂಡ ಡಿ.ಕೆ.ಶಿವಕುಮಾರ್ ಮತ್ತಿತರರೊಂದಿಗೆ ರಾಹುಲ್‍ಗಾಂಧಿ ಮಾತುಕತೆ ನಡೆಸಿದರು.
ಮುಂದಿನ ಚುನಾವಣೆಗೆ ಪ್ರತಿಪಕ್ಷಗಳು ನಡೆಸುವ ತಂತ್ರಗಳಿಗೆ ಪ್ರತಿತಂತ್ರ ಹೆಣೆಯುವ ಬಗ್ಗೆ ಚರ್ಚಿಸಿದರು. ಮೈಸೂರು, ಮಂಡ್ಯ ಜಿಲ್ಲೆಯಲ್ಲಿ ಗೆಲ್ಲುವ ಅಭ್ಯರ್ಥಿಗಳ ಬಗ್ಗೆಯೂ ಮಾತುಕತೆ ನಡೆಸಿದರು.
ಮೈಸೂರು-ಮಂಡ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳೊಂದಿಗೆ ಸಭೆ ನಡೆಸಿ, ನಂತರ ನಿನ್ನೆ ನಿಧನ ಹೊಂದಿದ ಬೇಲೂರಿನ ಕಾಂಗ್ರೆಸ್ ಶಾಸಕ ರುದ್ರೇಶ್‍ಗೌಡರ ತವರೂರು ಹಾಸನ ಜಿಲ್ಲೆ ಬೇಲೂರು ತಾಲೂಕು ಚೀಕನಹಳ್ಳಿಗೆ ತೆರಳಿ ಅಂತಿಮ ದರ್ಶನ ಪಡೆದರು.
ಬೇಲೂರಿನಿಂದ ಸೀದಾ ಮಂಡ್ಯ ಪ್ರವಾಸಕ್ಕೆ ರಾಹುಲ್ ತೆರಳಿದರು. ಅಲ್ಲಿ ರೋಡ್ ಶೋನಲ್ಲಿ ಭಾಗವಹಿಸಿ ಸಂಜೆ ಮತ್ತೆ ಮೈಸೂರಿಗೆ ಹಿಂದಿರುಗಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ