ಕಾರೊಂದು ಟ್ರಕ್‍ಗೆ ಅಪ್ಪಳಿಸಿದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತ:

ಕೈತಾಲ್, ಮಾ.25-ಕಾರೊಂದು ಟ್ರಕ್‍ಗೆ ಅಪ್ಪಳಿಸಿದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟು, ಇತರೆ ಮೂವರು ತೀವ್ರ ಗಾಯಗೊಂಡಿರುವ ಘಟನೆ ಹರ್ಯಾಣದ ಕೈತಾಲ್‍ನಲ್ಲಿ ಇಂದು ಮುಂಜಾನೆ ಸಂಭವಿಸಿದೆ.
ಮೃತಪಟ್ಟವರಲ್ಲಿ ಇಬ್ಬರು ಮಹಿಳೆಯರೂ ಸೇರಿದ್ದಾರೆ. ದೆಹಲಿಯಿಂದ ಸಿವಾನ್‍ಗೆ ಹಿಂದಿರುಗುತ್ತಿದ್ದಾಗ ಸಕ್ಕರೆ ಕಾರ್ಖಾನೆಯೊಂದರ ಬಳಿ ಈ ಘಟನೆ ಸಂಭವಿಸಿದೆ ಎಂದು ಪೆÇಲೀಸರು ತಿಳಿಸಿದ್ದಾರೆ.
ಇಬ್ಬರು ಮಕ್ಕಳೂ ಸೇರಿದಂತೆ ಗಾಯಗೊಂಡಿರುವ ಮೂವರನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ