ಕೆಎಸ್​ಆರ್​ಟಿಸಿ ಬಸ್ ನಲ್ಲೇ ಆತ್ಮಹತ್ಯೆಗೆ ಶರಣಾದ ನಿರ್ವಾಹಕ

ಬೀದರ್:ಮಾ-25: ಕೆಎಸ್​ಆರ್​ಟಿಸಿ ಬಸ್ ನಿರ್ವಾಹಕರೊಬ್ಬರು ಬಸ್ ನಲ್ಲೇ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೀದರ್ ನ ಬಸವಕಲ್ಯಾಣ ಡಿಪೋದಲ್ಲಿ ನಡೆದಿದೆ.

ಶಿವರಾಜ ಕುಂಬಾರೆ ಮುಧೋಳ (50)ಮೃತ ವ್ಯಕ್ತಿ. ಮೇಲಧಿಕಾರಿಗಳು ಐದು ದಿನಗಳಿಂದ ಕೆಲಸಕ್ಕೆ ಅನುವು ಮಾಡಿಕೊಡದೆ ಇದ್ದಿದ್ದಕ್ಕೆ ಮನನೊಂದ ನಿರ್ವಾಹಕ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಹಿರಿಯ ಅಧಿಕಾರಿಗಳ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಸ್ಥಳಕ್ಕೆ ಬಸವಕಲ್ಯಾಣ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

KSRTC Bus, conductor,suicide, inside the Bus

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ