ಶ್ರೀಕೃಷ್ಣ ಮಾಯ್ಲೆಂಗಿಗೆ ಗೌರವ ಡಾಕ್ಟರೇಟ್ ಪ್ರಶಸ್ತಿ ಪ್ರದಾನ

ಬೆಂಗಳೂರು: ಹಿರಿಯ ಪತ್ರಕರ್ತ ಶ್ರೀಕೃಷ್ಣ ಮಾಯ್ಲೆಂಗಿ ಅವರಿಗೆ ಆರೋಗ್ಯ ಕ್ಷೇತ್ರದಲ್ಲಿನ ಸಾಧನೆಗಾಗಿ ಗೌರವ ಡಾಕ್ಟರೇಟ್ ಪ್ರಶಸ್ತಿ ಲಭಿಸಿದೆ.
ಎರಡು ದಶಕಗಳ ಇಲೆಕ್ಟ್ರಾನಿಕ್ ಹಾಗೂ ಮುದ್ರಣ ಮಾಧ್ಯಮದ ಅನುಭವವಿರುವ ಶ್ರೀಕೃಷ್ಣ ಮಾಯ್ಲೆಂಗಿ ಅವರು ಕನ್ನಡದಲ್ಲಿ ‘ವೈದ್ಯಲೋಕ’ ಹಾಗೂ ಇಂಗ್ಲೀಷ್ನಲ್ಲಿ ಹೆಲ್ತ್ ವಿಷನ್ ಎಂಬ ಆರೋಗ್ಯ ಮಾಸಪತ್ರಿಕೆಗಳನ್ನು ಪ್ರಕಟಿಸುತ್ತಿದ್ದಾರೆ. ಆರೋಗ್ಯದ ಬಗ್ಗೆ ಜನಜಾಗೃತಿ ಮೂಡಿಸಲು ಶಾಲಾ ಕಾಲೇಜುಗಳಲ್ಲಿ ಆರೋಗ್ಯ ನಂದನ ಎಂಬ ಕಾರ್ಯಕ್ರಮಗಳನ್ನು ಆಯೋಜಿಸುವುದರ ಜೊತೆಗೆ ಇದೀಗ ಆರೋಗ್ಯ ಕ್ಷೇತ್ರದ ಬಗ್ಗೆ ಸಮಗ್ರ ಮಾಹಿತಿ ನೀಡುವ www.vydyaloka.in ಮತ್ತು www.healthvision.inಎಂಬಎರಡುವೆಬ್ಪೋರ್ಟಲ್ಗಳನ್ನು ಆರಂಭಿಸಿದ್ದಾರೆ.

ಮೂಲತಃ ಕೇರಳದ ಕಾಸರಗೋಡಿನ ಕಾಟುಕುಕ್ಕೆ ಗ್ರಾಮದವರಾದ ಶ್ರೀಕೃಷ್ಣ ಮಾಯ್ಲೆಂಗಿ ಉದಯ ಟಿವಿಯಲ್ಲಿ ಹಿರಿಯ ವರದಿಗಾರರಾಗಿ ಸೇವೆ ಸಲ್ಲಿಸಿದ್ದರು. ರೋಟರಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಸೇರಿದಂತೆ ೨೦ಕ್ಕೂ ಅಧಿಕ ಸಂಘ ಸಂಸ್ಥೆಗಳು ಇವರಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಿವೆ.
ಪುಣೆಯಲ್ಲಿ ನಡೆದ ಸಮಾರಂಭದಲ್ಲಿ ಶ್ರೀಕೃಷ್ಣ ಮಾಯ್ಲೆಂಗಿ ಅವರಿಗೆ ಗೌರವ ಡಾಕ್ಟರೇಟ್ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ