ನಗರದ ದರ್ಬಾರ್ ಪಿಯು ಕಾಲೇಜಿನಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೇಂದ್ರದಲ್ಲಿ ಗಣಿತ ವಿಷಯದ ಸಾಮೂಹಿಕ ನಕಲು:

ವಿಜಯಪುರ,ಮಾ.26- ನಗರದ ದರ್ಬಾರ್ ಪಿಯು ಕಾಲೇಜಿನಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೇಂದ್ರದಲ್ಲಿ ಗಣಿತ ವಿಷಯದ ಸಾಮೂಹಿಕ ನಕಲು ನಡೆದಿರುವ ಬಗ್ಗೆ ತಿಳಿದು ಬಂದಿದ್ದು ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಸಿಬ್ಬಂದಿ ಹಾಗೂ ಪೊಲೀಸರು ಸಾಥ್ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
ಗಣಿತ ಪ್ರಶ್ನಪತ್ರಿಕೆ ಸೋರಿಕೆಯಾದ ಬಗ್ಗೆ ತಿಳಿದು ಬಂದಿದ್ದು, ಉತ್ತರಗಳನ್ನು ಸಿದ್ದಪಡಿಸಿ ಕಂತೆ ಕಂತೆ ನಕಲು ಪತ್ರಗಳನ್ನು ಪರೀಕ್ಷಾ ಕೇಂದ್ರದ ಹಿಂಭಾಗದಿಂದ ಕೊಡಲಾಗುತ್ತಿದೆ ಎಂದು ಆರೋಪಿಸಲಾಗಿದೆ.
ಈ ಬಗ್ಗೆ ಸೂಕ್ರ ಕ್ರಮಕೈಗೊಳ್ಳಬೇಕೆಂದು ಸಾರ್ವಜನಿಕರು ವಿದ್ಯಾರ್ಥಿಗಳ ಪೋಷಕರು ಸಂಬಂಧಿಸದ ಅಧಿಕಾರಿಗಳಲ್ಲಿ ಆಗ್ರಹಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ