ದರೋಡೆಕೋರರು ಚಾಕು ತೋರಿಸಿ ಬೆದರಿಸಿ1500 ನಗದು, ಮೊಬೈಲ್ ಕಸಿದುಕೊಂಡು ಪರಾರಿ:

ಬೆಂಗಳೂರು,ಮಾ.26- ನಡೆದು ಹೋಗುತ್ತಿದ್ದ ನಾಗಲ್ಯಾಂಡ್ ಮೂಲದ ವ್ಯಕ್ತಿಯನ್ನು ಅಡ್ಡಗಟ್ಟಿದ ದರೋಡೆಕೋರರು ಚಾಕು ತೋರಿಸಿ ಬೆದರಿಸಿ1500 ನಗದು, ಮೊಬೈಲ್ ಕಸಿದುಕೊಂಡಿರುವ ಘಟನೆ ಅಶೋಕನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಆನೆಪಾಳ್ಯ 10ನೇ ಕ್ರಾಸ್‍ನಲ್ಲಿ ಮೊನ್ನೆ ರಾತ್ರಿ ತಂಗ್‍ಸಿಂಗ್ ಎಂಬುವ ನಾಗಲ್ಯಾಂಡ್ ಮೂಲದ ವ್ಯಕ್ತಿ ನಡೆದು ಹೋಗುತ್ತಿದ್ದರು. ಈ ವೇಳೆ ಒಂದೇ ಬೈಕ್‍ನಲ್ಲಿ ಬಂದ ಮೂವರು ದರೋಡೆಕೋರರು ಇವರನ್ನು ಅಡ್ಡಗಟ್ಟಿ ಬೆದರಿಸಿ ದರೋಡೆ ನಡೆಸಿ ಪರಾರಿಯಾಗಿದ್ದಾರೆ. ಅಶೋಕನಗರ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ