ಸಕಲೇಶಪುರ-ಆಲೂರು ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‍ನಿಂದ ದಲಿತ ಸಮುದಾಯದ ಪರ್ವತಯ್ಯನವರಿಗೆ ಟಿಕೆಟ್ ನೀಡಲು ಒತ್ತಾಯ

ಬೆಂಗಳೂರು, ಮಾ.28-ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸಕಲೇಶಪುರ-ಆಲೂರು ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ದಲಿತ ಸಮುದಾಯದ ಪರ್ವತಯ್ಯನವರಿಗೆ ಟಿಕೆಟ್ ನೀಡಬೇಕೆಂದು ಒಕ್ಕೂಟದ ಪ್ರಧಾನ ಸಂಚಾಲಕ ಕಾಡಪ್ಪ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಸನ ಜಿಲ್ಲೆಯ ಸಕಲೇಶಪುರ ಮೀಸಲು ವಿಧಾನಸಭಾ ಕ್ಷೇತ್ರವು ಅತ್ಯಂತ ಹಿಂದುಳಿದಿದ್ದು, ಈ ಕ್ಷೇತ್ರದಲ್ಲಿ ಸುಮಾರು 1 ಲಕ್ಷದ 95 ಸಾವಿರ ಮತದಾರರಿದ್ದು, ಇವರಲ್ಲಿ ಸುಮಾರು 65 ಸಾವಿರಕ್ಕೂ ಹೆಚ್ಚು ದಲಿತ ಸಮುದಾಯದ ಮತದಾರರಿದ್ದಾರೆ. ಈ ಕ್ಷೇತ್ರದಲ್ಲಿ ಮೂಲಭೂತ ಸಮಸ್ಯೆಗಳಿದ್ದು, ಈ ಬಗ್ಗೆ ಅರಿವಿಲ್ಲದವರು ಮತ್ತು ಸ್ಥಳೀಯದಲ್ಲದವರು ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗುತ್ತಿದ್ದಾರೆ. ಆದ್ದರಿಂದ ನಮ್ಮ ಸಮಸ್ಯೆಗಳನ್ನು ಅರಿತ ಸ್ಥಳೀಯ ದಲಿತ ಮುಖಂಡರಿಗೆ ಕಾಂಗ್ರೆಸ್‍ನಿಂದ ಟಿಕೆಟ್ ನೀಡಬೇಕೆಂದು ಒತ್ತಾಯಿಸಿದರು.

ಒಂದು ವೇಳೆ ಕ್ಷೇತ್ರದ ಅರಿವಿಲ್ಲದವರಿಗೆ ಟಿಕೆಟ್ ನೀಡಿದರೆ ಮುಂದಿನ ದಿನಗಳಲ್ಲಿ ನಮ್ಮ ಕ್ಷೇತ್ರ ಇನ್ನು ಹಿಂದುಳಿದಿದೆ.ಇದನ್ನು ಪರಿಗಣಿಸದೆ ಇದ್ದರೆ ಚುನಾವಣೆ ಬಹಿಷ್ಕರಿಸುವುದಾಗಿ ತಿಳಿಸಿದರು.

ಕಾಂಗ್ರೆಸ್ ಪಕ್ಷದ ಆಕಾಂಕ್ಷಿಯಾಗಿರುವ ಕಾಫಿ ಬೆಳೆಗಾರರಾದ ಪರ್ವತಯ್ಯ ಕ್ಷೇತ್ರದ ಎಲ್ಲಾ ಜನರ ಪ್ರೀತಿ-ವಿಶ್ವಾಸಗಳಿಸಿದ್ದು, ಇವರಿಗೆ ಟಿಕೆಟ್ ನೀಡಬೇಕೆಂದು ಒತ್ತಾಯಿಸಿ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜು ಅವರಿಗೆ ಮನವಿ ಮಾಡಿದ್ದಾರೆ.
ಒಕ್ಕೂಟದ ಕಾರ್ಯದರ್ಶಿ ದೊಡ್ಡೀರಯ್ಯ, ಸಂಚಾಲಕ ಈರಣಯ್ಯ, ಕಾರ್ಯದರ್ಶಿ ಶ್ರೀನಿವಾಸ, ಕಾಡಳ್ಳಿ ಮತ್ತಿತರರು ಇದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ