ಕಾವೇರಿ ಜಲ ನಿರ್ವಹಣ ಮಂಡಳಿ ರಚಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಲುವುದಾಗಿ ಎಐಡಿಎಂಕೆ ಸಂಸದನ ಬೆದರಿಕೆ

ನವದೆಹಲಿ:ಮಾ-29: ಕಾವೇರಿ ಜಲ ನಿರ್ವಹಣ ಮಂಡಳಿಯನ್ನು ಕೂಡಲೇ ರಚಿಸಿ ಎಂದು ಒತ್ತಾಯಿಸಿರುವ ಎಐಡಿಎಂಕೆ ಸಂಸದ ನವನೀತ ಕೃಷ್ಣನ್‌, ಒಂದೊಮ್ಮೆ ಕೇಂದ್ರ ಸರಕಾರ ಗುರುವಾರದೊಳಗೆ ರಚಿಸದೆ ಇದ್ದಲ್ಲಿ ಆತ್ಮಹತ್ಯೆ ಮಾಡಿ ಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ.

ಸುಪ್ರೀಂ ಕೋರ್ಟ್‌ ಈ ಸಂಬಂಧ ಅಂತಿಮ ತೀರ್ಪು ನೀಡಿ ಆರು ವಾರಗಳೇ ಕಳೆದಿವೆ. ಆದರೆ ಕೇಂದ್ರ ಸರಕಾರ ಕಾವೇರಿ ಜಲ ನಿರ್ವಹಣಾ ಮಂಡಳಿ ರಚನೆಗೆ ಮುಂದಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರದ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಕೃಷ್ಣನ್,   ಕಾವೇರಿ ನಿರ್ವಹಣಾ ಮಂಡಳಿ ರಚಿಸದಿದ್ದಲ್ಲಿ ಆತ್ಮಹತ್ಯೆ ಮಾಡಿಕೊಳ್ಲುವುದಾಗಿ ತಿಳಿಸಿದ್ದಾರೆ. ಅಲ್ಲದೇ ಇದು ನನ್ನ ವೈಯಕ್ತಿಕ ನಿರ್ಧಾರ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಬೆನ್ನಲ್ಲೇ ಸುಪ್ರೀಂ ಕೋರ್ಟ್‌ ತೀರ್ಪು ಕಡೆಗಣಿಸುತ್ತಿರುವ ಹಿನ್ನೆಲೆಯಲ್ಲಿ ತಮಿಳುನಾಡು, ಪುದುಚೇರಿ ಸರಕಾರ ಕೇಂದ್ರದ ವಿರುದ್ಧ ಮತ್ತೆ ಕೋರ್ಟ್‌ ಮೆಟ್ಟಿಲೇರಲು ನಿರ್ಧರಿಸಿದೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ