ನಮ್ಮ ಬೆಂಗಳೂರು ನಮ್ಮ ಹೆಮ್ಮೆ ಕಾಂಗ್ರೆಸ್ ಬೃಹತ್ ಪಾದಯಾತ್ರೆ

ಬೆಂಗಳೂರು, ಮಾ.29- ನಗರದಾದ್ಯಂತ ನಡೆಯುತ್ತಿರುವ ನಮ್ಮ ಬೆಂಗಳೂರು ನಮ್ಮ ಹೆಮ್ಮೆ ಎಂಬ ಘೋಷವಾಕ್ಯದೊಂದಿಗೆ ಕಾಂಗ್ರೆಸ್‍ನ ಬೃಹತ್ ಪಾದಯಾತ್ರೆ ಹಾಗೂ ಸಮಾವೇಶ ಇಂದು ಮಹಾಲಕ್ಷ್ಮಿಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ನಡೆಯಲಿದೆ.

ಸಂಜೆ 4ಗಂಟೆಗೆ ಕುರುಬರಹಳ್ಳಿ ಮತ್ತು ಮಹಾಲಕ್ಷ್ಮಿಲೇಔಟ್ ವಿಧಾನಸಭಾ ಕ್ಷೇತ್ರದ ಪ್ರಮುಖ ರಸ್ತೆಗಳಲ್ಲಿ ಪಾದಯಾತ್ರೆ ನಡೆಯಲಿದ್ದು, ಸಂಜೆ 5 ಗಂಟೆಗೆ ಬೃಹತ್ ಸಮಾವೇಶ ಕುರುಬರಹಳ್ಳಿ ವೃತ್ತದ ರಾಜ್‍ಕುಮಾರ್ ಉದ್ಯಾನವನದ ಬಳಿ ಆಯೋಜಿಸಲಾಗಿದೆ.

ಸಚಿವರಾದ ಡಿ.ಕೆ.ಶಿವಕುಮಾರ್, ರಾಮಲಿಂಗಾರೆಡ್ಡಿ, ಕೆ.ಜೆ.ಜಾರ್ಜ್, ಎಚ್.ಎಂ.ರೇವಣ್ಣ, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‍ಗುಂಡೂರಾವ್, ಕಾಂಗ್ರೆಸ್ ಮುಖಂಡರಾದ ವಿ.ಆರ್.ಸುದರ್ಶನ್, ನಾರಾಯಣಸ್ವಾಮಿ, ಕೇಶವಮೂರ್ತಿ, ಗಿರೀಶ್ ಕೆ.ನಾಶಿ, ಬಿಬಿಎಂಪಿ ಆಡಳಿತ ಪಕ್ಷದ ನಾಯಕ ಶಿವರಾಜ್ ಮತ್ತಿತರರು ಭಾಗವಹಿಸಲಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ