ಕೆ.ಆರ್.ಕ್ಷೇತ್ರದ ಶಾಸಕ ಎಂ.ಕೆ.ಸೋಮಶೇಖರ್ ರಿಂದ ಕೋಟ್ಯಂತರ ರೂ. ಅವ್ಯವಹಾರ ಮಾಜಿ ಸಚಿವ ಎಸ್.ಎ.ರಾಮದಾಸ್ ಆರೋಪ

ಮೈಸೂರು, ಮಾ.29- ಪ್ರಧಾನಮಂತ್ರಿ ಅವಾಸ್ ಯೋಜನೆ, ಹೌಸಿಂಗ್ ಫಾರ್ ಆಲ್ ಯೋಜನೆಯನ್ನು ಕೆ.ಆರ್.ಕ್ಷೇತ್ರದ ಶಾಸಕ ಎಂ.ಕೆ.ಸೋಮಶೇಖರ್ ದುರ್ಬಳಕೆ ಮಾಡಿ ಕೋಟ್ಯಂತರ ರೂ. ಅವ್ಯವಹಾರ ಮಾಡಿದ್ದಾರೆ ಎಂದು ಮಾಜಿ ಸಚಿವ ಎಸ್.ಎ.ರಾಮದಾಸ್ ಆರೋಪಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿಂದು ಈ ಸಂಬಂಧ ದಾಖಲೆಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ಈ ಹಗರಣದಲ್ಲಿ ಏಳು ಕೋಟಿಗೂ ಹೆಚ್ಚು ಅವ್ಯವಹಾರ ನಡೆದಿದೆ ಎಂದು ದೂರಿದರು.
ಪ್ರಧಾನಮಂತ್ರಿಗಳ ಈ ಯೋಜನೆಯಡಿ ಗುರುತಿಸಲ್ಪಟ್ಟಿರುವ ಬಡವರಿಗೆ ನೀಡಬೇಕಾದ ಮನೆಗಳನ್ನು ಶಾಸಕ ಎಂ.ಕೆ.ಸೋಮಶೇಖರ್ ಅವರು ತಮ್ಮ ಆಪ್ತರು ಸೇರಿದಂತೆ ತಮಗೆ ಬೇಕಾದವರಿಗೆ ಅರ್ಜಿ ನೀಡಿ ಹಣ ಪಡೆದಿದ್ದಾರೆ ಎಂದು ಆರೋಪಿಸಿದರು.
ಶಾಸಕರ ಪಿಎ ರೇವಣ್ಣ ಹಾಗೂ ಅವರ ಸಹೋದರ ಸಂಬಂಧಿ ಗುರಣ್ಣ ಅವರು ಅರ್ಜಿಗಳ ಮೇಲೆ ಇಂತಿಷ್ಟು ಹಣ ಪಡೆದಿರುವುದಾಗಿ ಬರೆದಿದ್ದಾರೆ ಎಂದು ಹೇಳಿ ಅರ್ಜಿಗಳನ್ನು ಪತ್ರಕರ್ತರಿಗೆ ತೋರಿಸಿದರು.

ಈ ದಾಖಲೆಗಳು ಮೈಸೂರು ನಗರ ಪಾಲಿಕೆಗೆ ಬಂದಿರಲಿಲ್ಲ. ಕಳೆದ ಎರಡು ದಿನಗಳ ಹಿಂದೆ ಬಂದಿದೆ. ಹಾಗಾಗಿ ಇವುಗಳನ್ನು ನಾನು ಬಹಿರಂಗಪಡಿಸುತ್ತಿದ್ದೇನೆ ಎಂದು ತಿಳಿಸಿದರು.
ಇದಕ್ಕೆ ಸಂಬಂಧಪಟ್ಟಂತೆ ಸ್ಮಿಂಗ್ ಆಪರೇಷನ್ ವಿಡೀಯೋವನ್ನು ಸಹ ರಾಮದಾಸ್ ಪ್ರದರ್ಶಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ