ಬೀದರ್ ದಕ್ಷಿಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಖೇಣಿ ವಿರುದ್ಧ ಸಾಮಾಜಿಕ ಹೋರಾಟಗಾರ ಟಿ.ಜೆ.ಅಬ್ರಹಾಂ ಸ್ಪರ್ಧೆ

ಬೆಂಗಳೂರು,ಮಾ.31-ಬೀದರ್ ದಕ್ಷಿಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಫರ್ಧಿಸುತ್ತಿರುವ ಅಶೋಕ್ ಖೇಣಿ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸವುದಾಗಿ ಸಾಮಾಜಿಕ ಹೋರಾಟಗಾರ ಟಿ.ಜೆ.ಅಬ್ರಹಾಂ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖೇಣಿಯವರು ಈ ದೇಶದ ಪ್ರಜೆಯೇ ಅಲ್ಲ. ರಾಜ್ಯ ರೈತರಿಗೆ, ಸರ್ಕಾರಕ್ಕೆ, ನ್ಯಾಯಾಲಯಕ್ಕೆ ವಂಚಿಸಿದ್ದಾರೆ. ಅವರ ವಿರುದ್ದ ಸಮರ ಸಾರಲು ಈ ಬಾರಿ ನಾನು ಚುನಾವಣೆಯಲ್ಲಿ ಸ್ಪರ್ಧಿಸುತ್ತೇವೆ ಎಂದರು.
ಜೆಡಿಎಸ್ ವರಿಷ್ಠರಾದ ಎಚ್.ಡಿ.ದೇವೇಗೌಡರು, ಕುಮಾರಸ್ವಾಮಿ ಅವರಿಗೆ ಜೆಡಿಎಸ್‍ನಿಂದ ಟಿಕೆಟ್ ಕೇಳಿದ್ದೇವೆ. ಬಿಜೆಪಿಯ ಅಮಿತ್ ಷಾ ಅವರಿಗೆ ಟಿಕೆಟ್ ಕೇಳಿದ್ದೇವೆ ಎಂದು ಹೇಳಿದರು.

ಯಾವುದೇ ಪಕ್ಷ ಟಿಕೆಟ್ ನೀಡಿದವರು ಆ ಪಕ್ಷದಿಂದ ನಾನು ಸ್ಪರ್ಧಿಸುತ್ತೇನೆ. ಯಾವುದೇ ಪಕ್ಷ ಟಿಕೆಟ್ ನೀಡದಿದ್ದರೆ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ