ಮಂಡ್ಯ ಕ್ಷೇತ್ರದಿಂದಲೇ ಚುನಾವಣೆಗೆ ಸ್ಪರ್ಧಿಸುವಂತೆ ಅಭಿಮಾನಿಗಳಿಂದ ಅಂಬರೀಶ್ ಗೆ ಒತ್ತಾಯ

ಬೆಂಗಳೂರು, ಮಾ.31- ಮಂಡ್ಯ ಕ್ಷೇತ್ರದಿಂದಲೇ ಚುನಾವಣೆಗೆ ಸ್ಪರ್ಧಿಸುವಂತೆ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಅಂಬರೀಶ್ ಅವರನ್ನು ಭೇಟಿ ಮಾಡಿ ಒತ್ತಾಯಿಸಿದ್ದಾರೆ.

ನಗರದ ರೇಸ್‍ಕೋರ್ಸ್ ರಸ್ತೆ ಸಮೀಪವಿರುವ ನಿವಾಸಕ್ಕೆ ಭೇಟಿ ನೀಡಿದ ಮಂಡ್ಯ ಜಿಲ್ಲೆಯ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಮಂಡ್ಯದಿಂದಲೇ ಟಿಕೆಟ್ ಪಡೆದು ಸ್ಪರ್ಧಿಸಬೇಕು. ಚುನಾವಣಾ ಕಣದಿಂದ ಹಿಂದೆ ಸರಿಯಬಾರದು ಎಂದು ಆಗ್ರಹಿಸಿದ್ದಾರೆ.

ಅಭಿಮಾನಿಗಳ ಮನವಿಗೆ ಅಂಬರೀಶ್ ಅವರು ಯಾವುದೇ ಪ್ರತಿಕ್ರಿಯೆ ನೀಡದೆ ಅಲ್ಲಿಂದ ನಿರ್ಗಮಿಸಿದ್ದು, ಕೊನೆಗೆ ತಮ್ಮನ್ನು ಭೇಟಿ ಮಾಡಲು ಬಂದ ನಿಯೋಗವನ್ನೂ ಖಾಸಗಿ ಹೋಟೆಲ್‍ಗೆ ಕರೆಸಿಕೊಂಡು ಸಭೆ ನಡೆಸಿದ್ದಾರೆ. ಇದು ರಾಜಕೀಯವಾಗಿ ಕುತೂಹಲ ಕೆರಳಿಸಿದೆ.
ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ರೇಸ್‍ಕೋರ್ಸ್ ರಸ್ತೆಯಲ್ಲಿ ಪಕ್ಷದ ಸಭೆ ನಡೆಸದೆ ಸ್ಥಳಾಂತರ ಮಾಡಲಾಯಿತು ಎಂಬ ಮಾತುಗಳು ಕೇಳಿ ಬಂದಿವೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ